ತಿರುಪತಿ ದೇವಾಲಯ (ಕೃಪೆ: ಪಿಟಿಐ) 
ದೇಶ

ದೆಹಲಿಗೆ ಬರಲಿದ್ದಾರೆ ತಿರುಪತಿ ಬಾಲಾಜಿ!

ದೇಶದ ರಾಜಧಾನಿಯಲ್ಲಿ ನೆಲೆಸಿರುವ ಭಕ್ತರಿಗೆ ತಿಮ್ಮಪ್ಪನ ದರ್ಶನಕ್ಕೆ ಆಂಧ್ರಪ್ರದೇಶಕ್ಕೆ ಹೋಗಬೇಕೆಂದಿಲ್ಲ. ಯಾಕೆಂದರೆ ಅಕ್ಟೋಬರ್ 31 ರಿಂದ ನವೆಂಬರ್ 8ರ...

ನವದೆಹಲಿ: ದೇಶದ ರಾಜಧಾನಿಯಲ್ಲಿ ನೆಲೆಸಿರುವ ಭಕ್ತರಿಗೆ ತಿಮ್ಮಪ್ಪನ ದರ್ಶನಕ್ಕೆ ಆಂಧ್ರಪ್ರದೇಶಕ್ಕೆ ಹೋಗಬೇಕೆಂದಿಲ್ಲ. ಯಾಕೆಂದರೆ ಅಕ್ಟೋಬರ್ 31 ರಿಂದ ನವೆಂಬರ್ 8ರ ವರೆಗೆ ತಿರುಮಲದಲ್ಲಿ ನಡೆಯುವ ಉತ್ಸವವನ್ನು ದೆಹಲಿಯ ಜವಾಹರ್‌ಲಾಲ್ ನೆಹರೂ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.
ಇದೇ ಮೊದಲ ಬಾರಿಗೆ ಆಂಧ್ರಪ್ರದೇಶದ ಹೊರಗೆ ತಿರುಪತಿ ಉತ್ಸವವನ್ನು ಏರ್ಪಡಿಸಲಾಗಿದೆ. ತಿರುಪತಿಯಲ್ಲಿ ನಡೆಯುವ ಜಾತ್ರೆಯಂತೆಯೇ ಇಲ್ಲಿ ಎಲ್ಲಾ ರೀತಿಯ ಶೃಂಗಾರಗಳನ್ನು ಮಾಡಲಾಗುವುದು. ತಿರುಮಲದಲ್ಲಿವ ಜನರೇ ಇಲ್ಲಿ ಜಾತ್ರೆಯ ತಯಾರಿಗಳನ್ನು ಮಾಡುತ್ತಾರೆ.
ಶ್ರೀ ವೆಂಕಟೇಶ್ವರ ವೈಭವೋತ್ಸವಂ ದೆಹಲಿಯಲ್ಲಿ ನಡೆಯಲಿದ್ದು, ಅದನ್ನು ನಡೆಸಲು ಸುಮಾರು 160ಕ್ಕಿಂತಲೂ ಹೆಚ್ಚು ಪೂಜಾರಿಗಳು ದೆಹಲಿಗೆ ಆಗಮಿಸಿದ್ದಾರೆ. ಬಲ್ಲಮೂಲಗಳಲ ಪ್ರಕಾರ ಪ್ರಾಣಪ್ರತಿಷ್ಠೆ ಅಕ್ಟೋಬರ್ 3ರಂದು ನಡೆಯಲಿದೆ. 
ಸೇವೆಗಳ ನಂತರ ಲಡ್ಡೂ ಪ್ರಸಾದ ವಿತರಣೆ ಮಾಡಲಾಗುವುದು. ಪ್ರಸಾದ ತಯಾರಿಸಲು ತಿರುಮಲದಿಂದಲೇ ವಸ್ತುಗಳನ್ನು ತರಲಾಗುವುದು ಹಾಗೂ ತಯಾರಕರೂ ತಿರುಮಲದವರೇ ಆಗಿದ್ದಾರೆ ಎಂದು ಮೂಲಗಳು ಹೇಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT