ಪ್ರತಿಭಟನಾ ನಿರತ ವಿದ್ಯಾರ್ಥಿಗಳು (ಸಂಗ್ರಹ ಚಿತ್ರ) 
ದೇಶ

ಸುದೀರ್ಘ 139 ದಿನಗಳ ಮುಷ್ಕರ ಹಿಂಪಡೆದ ಎಫ್‌ಟಿಐಐ ವಿದ್ಯಾರ್ಥಿಗಳು

ಪುಣೆಯ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ(ಎಫ್‌ಟಿಐಐ) ಅಧ್ಯಕ್ಷ ಗಜೇಂದ್ರ ಚೌಹಾಣ್ ಅವರ ನೇಮಕವನ್ನು ವಿರೋಧಿಸಿ ಕಳೆದ 139 ದಿನಗಳಿಂದ...

ಮುಂಬೈ: ಪುಣೆಯ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ(ಎಫ್‌ಟಿಐಐ) ಅಧ್ಯಕ್ಷ ಗಜೇಂದ್ರ ಚೌಹಾಣ್ ಅವರ ನೇಮಕವನ್ನು ವಿರೋಧಿಸಿ ಕಳೆದ 139 ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ಎಫ್‌ಟಿಐಐ ವಿದ್ಯಾರ್ಥಿಗಳು ಬುಧವಾರ ಹಿಂಪಡೆದಿದ್ದಾರೆ.

ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಫ್‌ಟಿಐಐ ವಿದ್ಯಾರ್ಥಿ ನಾಯಕ ರಾಕೇಶ್ ಶುಕ್ಲಾ ಅವರು ಮುಷ್ಕರ ಹಿಂಪಡೆಯುತ್ತಿರುವುದನ್ನು ಖಚಿತಪಡಿಸಿದ್ದಾರೆ. ಆದರೆ ಶಾಂತಿಯುತ ಪ್ರತಿಭಟನೆ ಮುಂದುವರೆಸುವುದಾಗಿ ತಿಳಿಸಿದ್ದಾರೆ.

ಭಾರತೀಯ ಸಮಾಜದಲ್ಲಿ ನಿರಂಕುಶವಾದಿಗಳ ಪಡೆಗಳು ಮತ್ತಷ್ಟು ಬಲಗೊಳ್ಳುತ್ತಿವೆ ಎಂದು ಶುಕ್ಲಾ ಆರೋಪಿಸಿದ್ದಾರೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ರಾಜವರ್ಧನ್ ಸಿಂಗ್ ರಾಠೋಡ್ ಹಾಗೂ ಇತರೆ ಅಧಿಕಾರಿಗಳೊಂದಿಗೆ ಹಲವು ಸುತ್ತಿನ ಮಾತುಕತೆಯ ಬಳಿಕ ಎಫ್‌ಟಿಐಐ ವಿದ್ಯಾರ್ಥಿಗಳು ತಮ್ಮ ಮುಷ್ಕರವನ್ನು ಹಿಂಪಡೆದಿದ್ದಾರೆ.

ನಟ ಹಾಗೂ ಬಿಜೆಪಿ ನಾಯಕ ಗಜೇಂದ್ರ ಚೌಹಾಣ್ ಅವರ ನೇಮಕವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಎಫ್ ಟಿಐಐ ವಿದ್ಯಾರ್ಥಿಗಳು, ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಆದರೆ ಕೇಂದ್ರ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಕೆಲವು ವಿದ್ಯಾರ್ಥಿಗಳು ಆಸ್ಪತ್ರೆಗೂ ದಾಖಲಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT