ಸಂದೀಪ್ ದೀಕ್ಷಿತ್ 
ದೇಶ

1984 ರ ದಂಗೆಯಲ್ಲಿ ಜನರನ್ನು ರಕ್ಷಿಸಲು ವಿಫಲವಾಗಿದ್ದ ಸರ್ಕಾರ: ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್

1984 ರಲ್ಲಿ ನಡೆದ ಸಿಖ್ ವಿರೋಧಿ ದಂಗೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಂದಿನ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿತ್ತು ಎಂದು ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಹೇಳಿದ್ದಾರೆ.

ನವದೆಹಲಿ: 1984 ರಲ್ಲಿ ನಡೆದ ಸಿಖ್ ವಿರೋಧಿ ದಂಗೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಂದಿನ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿತ್ತು ಎಂದು ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಹೇಳಿದ್ದಾರೆ.
ಸಿಖ್ ವಿರೋಧಿ ದಂಗೆಯಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದು, ದಂಗೆ ನಡೆದಿದ್ದಕ್ಕೆ ಕಾಂಗ್ರೆಸ್ ಸರ್ಕಾರವನ್ನೇ ದೂಷಿಸಲಾಗಿತ್ತು. ಈ ಬಗ್ಗೆ ಮಾತನಾಡಿರುವ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಪುತ್ರ ಸಂದೀಪ್ ದೀಕ್ಷಿತ್, ಸ್ವತಂತ್ರ ಭಾರತದಲ್ಲಿ ಮೊದಲ ಬಾರಿಗೆ ಭಾರತ ಸರ್ಕಾರವೊಂದು ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲವಾಗಿತ್ತು ಎಂದು ಆರೋಪಿಸಿದ್ದಾರೆ.     
1984 ದಂಗೆಗೆ ಸಂಬಂಧಿಸಿದಂತೆ ನಿರಂಜನ್ ಮುಖ್ಯೋಪಾಧ್ಯಾಯ ಬರೆದಿರುವ ಅನ್ಟೋಲ್ಡ್ ಅಗೊನಿ ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸಂದೀಪ್ ದೀಕ್ಷಿತ್ ಸರ್ಕಾರ ವಿಫಲವಾಗಿತ್ತು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜನರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯವಾಗಿತ್ತು. ಆದರೆ ಸರ್ಕಾರ ಇದರಲ್ಲಿ ವಿಫಲವಾಗಿದೆ. ನಡೆದಿರುವ ಘಟನೆಗಳನ್ನು ಮರೆಯದೇ ಅದನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಸಹ ಒಂದು ರೀತಿಯ ಪ್ರಮುಖ ಜವಾಬ್ದಾರಿ  ಎಂದು ಹಿರಿಯ ಅಂಕಣಗಾರ್ತಿ ಊರ್ವಶಿ ಬಟಾಲಿಯಾ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT