ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ (ಸಂಗ್ರಹ ಚಿತ್ರ) 
ದೇಶ

ಅಮಿತ್ ಶಾ ರ್ಯಾಲಿ ವೇಳೆ ಗೋಡೆ ಕುಸಿತ: 10 ಗಾಯ

ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರ್ಯಾಲಿ ನಡೆಯುಸುತ್ತಿದ್ದ ವೇಳೆ ಗೋಡೆಯೊಂದು ಕುಸಿದು ಬಿದ್ದ ಪರಿಣಾಮ 4 ಮಕ್ಕಳು ಸೇರಿ 10 ಮಂದಿ ಗಾಯಗೊಂಡಿರುವ ಘಟನೆ ಬಿಹಾರದ ಬಾಘದಲ್ಲಿ ಗುರುವಾರ ನಡೆದಿದೆ...

ಬಾಘ: ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರ್ಯಾಲಿ ನಡೆಯುಸುತ್ತಿದ್ದ ವೇಳೆ ಗೋಡೆಯೊಂದು ಕುಸಿದು ಬಿದ್ದ ಪರಿಣಾಮ 4 ಮಕ್ಕಳು ಸೇರಿ 10 ಮಂದಿ ಗಾಯಗೊಂಡಿರುವ ಘಟನೆ ಬಿಹಾರದ ಬಾಘದಲ್ಲಿ ಗುರುವಾರ ನಡೆದಿದೆ.

ಚುನಾವಣೆ ಹಿನ್ನೆಲೆಯಲ್ಲಿ ರ್ಯಾಲಿ ನಡೆಸಲು ಬಿಹಾರ ಬಾಬುಯ್ ಟೋಲಾ ಕ್ರೀಡಾಂಗಣಕ್ಕೆ ಅಮಿತ್ ಶಾ ಬಂದಿದ್ದರು. ಈ ವೇಳೆ ಹೆಲಿಕಾಪ್ಟರ್ ನಿಂದ ಇಳಿಯುತ್ತಿದ್ದ ಅಮಿತ್ ಶಾ ಅವರನ್ನು ನೋಡಲು ಮಕ್ಕಳು ಸೇರಿದಂತೆ ಹಲವು ಗೋಡೆ ಮೇಲೆ ಹತ್ತಿದ್ದರು. ಈ ವೇಳೆ ಗೋಡೆ ಕುಸಿದು ಬಿದ್ದಿದೆ ಎಂದು ವರಿಷ್ಠಾಧಿಕಾರಿ ಆನಂದ್ ಕುಮಾರ್ ಸಿಂಗ್ ಅವರು ಹೇಳಿದ್ದಾರೆ.

ಗೋಡೆ ತೀರಾ ಹಳೆಯ ಕಾಲದ್ದಾದ್ದರಿಂದ ಮಳೆ ಬಿದ್ದು ಬಿರುಕುಗಳು ಬಿಟ್ಟಿದ್ದವು. ಬಿರುಕು ಬಿದ್ದ ಗೋಡೆಯ ಮೇಲೆ ಜನರು ನಿಂತ ಕಾರಣ ಕುಸಿದು ಬಿದ್ದಿದೆ. ಗೋಡೆ ಧರೆಗುರುಳುತ್ತಿದ್ದಂತೆ ಸ್ಥಳದಲ್ಲೆ ಕೆಲವು ಗಂಟೆಗಳ ಕಾಲ ಉದ್ವಿಘ್ನ ವಾತಾವರಣ ನಿರ್ಮಾಣವಾಗಿತ್ತು. ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ಹೇಳಿದ್ದಾರೆ.

ಪ್ರಸ್ತುತ  ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಬಾಘ ಪೊಲೀಸ್ ಠಾಣಾಧಿಕಾರಿ ಸತ್ಯೇಂದರ್ ರಾಮ್ ಹೇಳಿದ್ದಾರೆ.

ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅಮಿತ್ ಶಾ ಅವರು, ಗಾಯಾಳುಕುರಿತಂತೆ ಸಹಾನುಭೂತಿ ವ್ಯಕ್ತಪಡಿಸಿದ್ದು, ಶೀಘ್ರದಲ್ಲೇ ಗುಣಮುಖರಾಗುವಂತೆ ಕೋರಿದ್ದಾರೆ.

ಘಟನೆ ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿದ್ದಂತೆ ತಮ್ಮ ರ್ಯಾಲಿಯನ್ನು ಆರಂಭಿಸಿದ ಅಮಿತ್ ಶಾ ಅವರು, ಮಹಾಮೈತ್ರಿ ಕೂಟವನ್ನು ಸೋಲುವಂತೆ ಮಾಡಿ ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿ ಪಕ್ಷಕ್ಕೆ ಮತ ಹಾಕುವಂತೆ ಜನತೆಯ ಬಳಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT