ಭೂಗತ ಪಾತಕಿ ಚೋಟಾ ರಾಜನ್ (ಸಂಗ್ರಹ ಚಿತ್ರ) 
ದೇಶ

ರಾಜನ್ ಗಡಿಪಾರು ವಿಚಾರದಲ್ಲಿ ಸ್ಪಷ್ಟನೆ ನೀಡಲು ಸಾಧ್ಯವಿಲ್ಲ: ಗುರ್ಜಿತ್ ಸಿಂಗ್

ಭೂಗತ ಪಾತಕಿ ಚೋಟಾ ರಾಜನ್ ಗಡಿಪಾರು ವಿಚಾರದಲ್ಲಿ ಸ್ಪಷ್ಟನೆ ನೀಡಲು ಸಾಧ್ಯವಿಲ್ಲ ಎಂದು ಇಂಡೋನೇಷಿಯಾದಲ್ಲಿರುವ ಭಾರತೀಯ ರಾಯಭಾರಿ ಗುರ್ಜಿತ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ...

ಬಾಲಿ: ಭೂಗತ ಪಾತಕಿ ಚೋಟಾ ರಾಜನ್ ಗಡಿಪಾರು ವಿಚಾರದಲ್ಲಿ ಸ್ಪಷ್ಟನೆ ನೀಡಲು ಸಾಧ್ಯವಿಲ್ಲ ಎಂದು ಇಂಡೋನೇಷಿಯಾದಲ್ಲಿರುವ ಭಾರತೀಯ ರಾಯಭಾರಿ ಗುರ್ಜಿತ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

ಚೋಟಾ ರಾಜನ್ ವಿಚಾರದಲ್ಲಿ ಅಧಿಕಾರಿಗಳು ತಡ ಮಾಡುತ್ತಿದ್ದಾರೆಂಬುದೊಂದು ತಪ್ಪಿ ಗ್ರಹಿಕೆ. ಪ್ರಕರಣ ಸಂಬಂಧ ಅಧಿಕಾರಿಗಳು ಕೆಲವು ಕಾರ್ಯವಿಧಾನಗಳನ್ನು ಅನುಸರಿಸಬೇಕಾಗಿದ್ದು, ಈ ಕಾರ್ಯವಿಧಾನಗಳನ್ನು ಪ್ರಕರಣಕ್ಕೆ ಸಂಬಂಧಿತ ಭಾರತೀಯ ಸಂಸ್ಥೆಗಳು ನಿರ್ಧಾರ ಮಾಡುತ್ತದೆ. ಹೀಗಾಗಿ ನಮಗೆ ನೀಡಿದ ನಿರ್ದೇಶನಗಳನ್ನು ನಾವು ಅನುಸರಿಸುತ್ತಿದ್ದೇವೆ. ಪ್ರಕರಣ ಸಂಬಂಧ ನಮ್ಮ ರಾಯಭಾರಿಗಳು ಈಗಾಗಲೇ ಬಾಲಿಗೆ ಹೋಗಿದ್ದು, ಕೇಂದ್ರ ಗೃಹ ಸಚಿವರು ನೀಡಿ ನಿರ್ದೇಶನವನ್ನು ನಾವು ಪಾಲಿಸುತ್ತೇವೆ ಎಂದು ಹೇಳಿದ್ದಾರೆ.

ಅಧಿಕಾರಿಗಳು ನಿರ್ಧಾರ ಹಾಗೂ ಕಾರ್ಯವಿಧಾನಗಳನ್ನು ಹೇಳಿದರೆ ನಾವು ಆ ನಿರ್ದೇಶಕ್ಕನುಗುಣವಾಗಿ ಪಾಲನೆ ಮಾಡುತ್ತೇವೆ. ಪ್ರಸ್ತುತ ಅಗತ್ಯವಿರುವ ಕ್ರಮವನ್ನು ಕೈಗೊಳ್ಳಲಾಗಿದ್ದು, ಕಾರ್ಯವಿಧಾನಗಳು ಪ್ರಗತಿಯಲ್ಲಿವೆ ಎಂದು ಹೇಳಿದ್ದಾರೆ.

ಹಲವು ಪಾತಕ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ರಾಜನ್ ನೂರಾರು ಹತ್ಯಾ ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಭಾರತದ ಪೊಲೀಸರಿಗೆ ಹೆದರಿ ವಿದೇಶಕ್ಕೆ ಹಾರಿದ್ದ ಚೋಟಾರಾಜನ್ ನನ್ನು ಬಂಧಿಸಿಲು 1995ರಲ್ಲಿ ಕೇಂದ್ರ ಸರ್ಕಾರ ಮತ್ತು ಇಂಟರ್ ಪೋಲ್ ರೆಡ್ ಕಾರ್ನರ್ ನೋಟಿಸ್ ಹೊರಡಿಸಿತ್ತು. ಇದಾಗ್ಯೂ ವಿವಿಧ ವೇಷ ಧರಿಸಿ ತಲೆಮರೆಸಿಕೊಂಡಿದ್ದ  ರಾಜನ್ ನಾನಾ ದೇಶಗಳಿಗೆ ಪರಾರಿಯಾಗುತ್ತಿದ್ದ. ಇದೀಗ ಈತನನ್ನು ಸಿಡ್ನಿ ಪೊಲೀಸರ ಸಹಾಯದಿಂದ ಇಂಡೋನೇಷ್ಯಾ ಪೊಲೀಸರು ಅ.26 ರಂದು ಬಂಧನಕ್ಕೊಳಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT