ಗೋಮಾಂಸದ ಪ್ರಯೋಜನಗಳ ಬಗ್ಗೆ ಲೇಖನ ಪ್ರಕಟಿಸಿದ್ದ ಸಂಪಾದಕನ ವಜಾ 
ದೇಶ

ಗೋಮಾಂಸದ ಪ್ರಯೋಜನಗಳ ಬಗ್ಗೆ ಲೇಖನ: ಹರ್ಯಾಣಾದಲ್ಲಿ ಮ್ಯಾಗಜೀನ್ ಸಂಪಾದಕಿ ವಜಾ

ಗೋಮಾಂಸ ಸೇವನೆಯಿಂದಾಗುವ ಪ್ರಯೋಜನಗಳ ಬಗ್ಗೆ ಲೇಖನ ಪ್ರಕಟಿಸಿದ್ದ ಶಿಕ್ಷಾ ಸಾರ್ಥಿ ಮ್ಯಾಗಜೀನ್ ಸಂಪಾದಕಿಯನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ.

ಹರ್ಯಾಣ: ಬೀಫ್ ವಿಚಾರದಲ್ಲಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವಾಗಲೇ, ಗೋಮಾಂಸ, ಕರು ಮಾಂಸಗಳ ಸೇವನೆಯಿಂದ ಮಾನವದೇಹದಲ್ಲಿ ಕಬ್ಬಿಣಾಂಶ ಹೀರುವ ಸಾಮರ್ಥ್ಯ ಹೆಚ್ಚಾಗುತ್ತದೆ ಎಂದು ಲೇಖನ ಪ್ರಕಟಿಸಿದ್ದ ಶಿಕ್ಷಾ ಸಾರ್ಥಿ ಮ್ಯಾಗಜೀನ್ ಸಂಪಾದಕಿಯನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ.
ಹರ್ಯಾಣದ ಶಿಕ್ಷಣ ಇಲಾಖೆಯ ಸೊಸೈಟಿಯೊಂದರ ಮ್ಯಾಗಜೀನ್ ನಲ್ಲಿ ಗೋಮಾಂಸ ಸೇವನೆಯಿಂದಾಗುವ ಪ್ರಯೋಜನಗಳ ಬಗ್ಗೆ ಲೇಖನ ಪ್ರಕಟಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮ್ಯಾಗಜೀನ್ ನ ಸಂಪಾದಕಿ ದೇವಯಾನಿ ಸಿಂಗ್ ಅವರನ್ನು ವಜಾಗೊಳಿಸಲಾಗಿದೆ.  ಸಂಪಾದಕರನ್ನು ವಜಾಗೊಳಿಸಿರುವ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿರುವ ಹರ್ಯಾಣ ಶಿಕ್ಷಣ ಸಚಿವ ರಾಮ್ ಬಿಲಾಸ್, ಹರ್ಯಾಣ ಮ್ಯಾಗಜೀನ್ ನಲ್ಲಿ ಈ ರೀತಿಯ ಲೇಖನಗಳು ಪ್ರಕಟವಾಗಬಾರದಿತ್ತು. ಆದರೆ ವೈಜ್ಞಾನಿಕ ಆಧಾರಗಳನ್ನಿಟ್ಟುಕೊಂಡು ಗೋಮಾಂಸ ಸೇವನೆಯಿಂದಾಗುವ ಪ್ರಯೋಜನಗಳನ್ನು ವಿಶ್ಲೇಶಿಸಲಾಗಿತ್ತು ಎಂದು ಸಂಪಾದಕರು ಸಮರ್ಥನೆ ನೀಡಿದ್ದಾರೆ. ಸಂಪಾದಕ ಹುದ್ದೆಯಿಂದ ದೇವಯಾನಿ ಸಿಂಗ್ ಅವರನ್ನು ವಜಾಗೊಳಿಸಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ರಾಮ್ ಬಿಲಾಸ್ ಎಂದು ಹೇಳಿದ್ದಾರೆ.
ಭಾರತದಲ್ಲಿ ಗೋವಿನ ಬಗ್ಗೆ  ಪೂಜನೀಯ ಭಾವನೆಯಿದೆ. ಹರ್ಯಾಣ  ಗೋಹತ್ಯೆಗೆ ಸಂಬಂಧಿಸಿದಂತೆ ಕಠಿಣ ಕಾನೂನು ಪಾಲಿಸುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.  ಬೀಫ್ ಸೇವನೆಯಿಂದಾಗುವ ಪ್ರಯೋಜನಗಳ ಬಗ್ಗೆ ಸುಮಾರು 48 ಪುಟಗಳ
ಮಾಹಿತಿಯನ್ನೊಳಗೊಂಡ ಸುದೀರ್ಘ ಲೇಖನ ಪ್ರಕಟವಾಗಿದೆ. ಗೋಮಾಂಸ ಸೇವನೆ ಮಾಡುವುದಕ್ಕೆ ಕೆಲ ದಿನಗಳ ಹಿಂದೆ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT