ಗೋಮಾಂಸದ ಪ್ರಯೋಜನಗಳ ಬಗ್ಗೆ ಲೇಖನ ಪ್ರಕಟಿಸಿದ್ದ ಸಂಪಾದಕನ ವಜಾ 
ದೇಶ

ಗೋಮಾಂಸದ ಪ್ರಯೋಜನಗಳ ಬಗ್ಗೆ ಲೇಖನ: ಹರ್ಯಾಣಾದಲ್ಲಿ ಮ್ಯಾಗಜೀನ್ ಸಂಪಾದಕಿ ವಜಾ

ಗೋಮಾಂಸ ಸೇವನೆಯಿಂದಾಗುವ ಪ್ರಯೋಜನಗಳ ಬಗ್ಗೆ ಲೇಖನ ಪ್ರಕಟಿಸಿದ್ದ ಶಿಕ್ಷಾ ಸಾರ್ಥಿ ಮ್ಯಾಗಜೀನ್ ಸಂಪಾದಕಿಯನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ.

ಹರ್ಯಾಣ: ಬೀಫ್ ವಿಚಾರದಲ್ಲಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವಾಗಲೇ, ಗೋಮಾಂಸ, ಕರು ಮಾಂಸಗಳ ಸೇವನೆಯಿಂದ ಮಾನವದೇಹದಲ್ಲಿ ಕಬ್ಬಿಣಾಂಶ ಹೀರುವ ಸಾಮರ್ಥ್ಯ ಹೆಚ್ಚಾಗುತ್ತದೆ ಎಂದು ಲೇಖನ ಪ್ರಕಟಿಸಿದ್ದ ಶಿಕ್ಷಾ ಸಾರ್ಥಿ ಮ್ಯಾಗಜೀನ್ ಸಂಪಾದಕಿಯನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ.
ಹರ್ಯಾಣದ ಶಿಕ್ಷಣ ಇಲಾಖೆಯ ಸೊಸೈಟಿಯೊಂದರ ಮ್ಯಾಗಜೀನ್ ನಲ್ಲಿ ಗೋಮಾಂಸ ಸೇವನೆಯಿಂದಾಗುವ ಪ್ರಯೋಜನಗಳ ಬಗ್ಗೆ ಲೇಖನ ಪ್ರಕಟಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮ್ಯಾಗಜೀನ್ ನ ಸಂಪಾದಕಿ ದೇವಯಾನಿ ಸಿಂಗ್ ಅವರನ್ನು ವಜಾಗೊಳಿಸಲಾಗಿದೆ.  ಸಂಪಾದಕರನ್ನು ವಜಾಗೊಳಿಸಿರುವ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿರುವ ಹರ್ಯಾಣ ಶಿಕ್ಷಣ ಸಚಿವ ರಾಮ್ ಬಿಲಾಸ್, ಹರ್ಯಾಣ ಮ್ಯಾಗಜೀನ್ ನಲ್ಲಿ ಈ ರೀತಿಯ ಲೇಖನಗಳು ಪ್ರಕಟವಾಗಬಾರದಿತ್ತು. ಆದರೆ ವೈಜ್ಞಾನಿಕ ಆಧಾರಗಳನ್ನಿಟ್ಟುಕೊಂಡು ಗೋಮಾಂಸ ಸೇವನೆಯಿಂದಾಗುವ ಪ್ರಯೋಜನಗಳನ್ನು ವಿಶ್ಲೇಶಿಸಲಾಗಿತ್ತು ಎಂದು ಸಂಪಾದಕರು ಸಮರ್ಥನೆ ನೀಡಿದ್ದಾರೆ. ಸಂಪಾದಕ ಹುದ್ದೆಯಿಂದ ದೇವಯಾನಿ ಸಿಂಗ್ ಅವರನ್ನು ವಜಾಗೊಳಿಸಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ರಾಮ್ ಬಿಲಾಸ್ ಎಂದು ಹೇಳಿದ್ದಾರೆ.
ಭಾರತದಲ್ಲಿ ಗೋವಿನ ಬಗ್ಗೆ  ಪೂಜನೀಯ ಭಾವನೆಯಿದೆ. ಹರ್ಯಾಣ  ಗೋಹತ್ಯೆಗೆ ಸಂಬಂಧಿಸಿದಂತೆ ಕಠಿಣ ಕಾನೂನು ಪಾಲಿಸುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.  ಬೀಫ್ ಸೇವನೆಯಿಂದಾಗುವ ಪ್ರಯೋಜನಗಳ ಬಗ್ಗೆ ಸುಮಾರು 48 ಪುಟಗಳ
ಮಾಹಿತಿಯನ್ನೊಳಗೊಂಡ ಸುದೀರ್ಘ ಲೇಖನ ಪ್ರಕಟವಾಗಿದೆ. ಗೋಮಾಂಸ ಸೇವನೆ ಮಾಡುವುದಕ್ಕೆ ಕೆಲ ದಿನಗಳ ಹಿಂದೆ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT