ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ವವೀಸ್ (ಸಂಗ್ರಹ ಚಿತ್ರ) 
ದೇಶ

ಶಿವಸೇನೆಯೊಂದು ನಾಟಕದ ಕಂಪನಿ: ದೇವೇಂದ್ರ ಫಡ್ನವೀಸ್

ಬಿಜೆಪಿ ಮೈತ್ರಿ ಪಕ್ಷವಾಗಿರುವ ಶಿವಸೇನೆಯೊಂದು ನಾಟಕದ ಕಂಪನಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ವವೀಸ್ ಅವರು ಶುಕ್ರವಾರ ಹೇಳಿದ್ದಾರೆ...

ಮುಂಬೈ: ಬಿಜೆಪಿ ಮೈತ್ರಿ ಪಕ್ಷವಾಗಿರುವ ಶಿವಸೇನೆಯೊಂದು ನಾಟಕದ ಕಂಪನಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ವವೀಸ್ ಅವರು ಶುಕ್ರವಾರ ಹೇಳಿದ್ದಾರೆ.

ಮಹರಾಷ್ಟ್ರದ ಪಿಡಬ್ಲ್ಯೂಡಿ ಸಚಿವ ಏಕನಾಥ್ ಶಿಂಧೆ ಸಲ್ಲಿಸಿದ್ದ ರಾಜಿನಾಮೆ ಪತ್ರವನ್ನು ಸ್ವೀಕರಿಸಲು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ನಿರಾಕರಿಸಿರುವುದರ ಕುರಿತಂತೆ  ರ್ಯಾಲಿಯೊಂದರಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಶಿವಸೇನೆಯೊಂದು ನಾಟಕದ ಕಂಪನಿಯಿದ್ದಂತೆ. ಕಲ್ಯಾಣ್-ಡೋಂಬಿವಲಿಯಲ್ಲಿನ ಸ್ಥಳೀಯ ಚುನಾವಣೆಯಲ್ಲಿ ಎಲ್ಲಿ ಸೋಲನ್ನು ಅನುಭವಿಸುತ್ತೇವೆಯೇ ಎಂಬ ನಿರಾಶೆಯಲ್ಲಿ ಬಿಜೆಪಿ ಹಾಗೂ ಶಿವಸೇನೆಯಿದೆ ಎಂದು ಹೇಳಿದ್ದಾರೆ.

ಹುಲಿ ಹೆಜ್ಜೆ ಬಗ್ಗೆ ನಮಗೆ ಹೇಳಬೇಡಿ. ನಾವು ಹುಲಿ ಬಾಯಿಯೊಳಗೆ ಕೈ ಹಾಕಿ ಅದರ ಹಲ್ಲಿನ ಸಂಖ್ಯೆ ಎಣಿಸುವವರು ನಾವು. ಶಿಂಧೆ ರಾಜಿನಾಮೆಯೊಂದು ನಾಟಕೀಯ ಬೆಳವಣಿಗೆಯಾಗಿದ್ದು, ಇದರಿಂದ ಯಾರೂ ಭಯ ಪಡಬೇಕಿಲ್ಲ. ಎಂದು ತಮ್ಮ ಬೆಂಬಲಿಕರಿಗೆ ಹೇಳಿದ್ದಾರೆ.

ಮಹಾರಾಷ್ಟ್ರದ ಸರ್ಕಾರ ನನ್ನ ಸಲಹೆಗಳನ್ನು ಸ್ವೀಕರಿಸುತ್ತಿಲ್ಲ ಎಂದು ಆರೋಪ ವ್ಯಕ್ತಪಡಿಸಿದ್ದ ಮಹಾರಾಷ್ಟ್ರದ ಪಿಡಬ್ಸ್ಯೂಡಿ ಸಚಿವ ಏಕನಾಥ್ ಶಿಂಧೆ ಅವರು ಇಂದು ಸಾರ್ವಜನಿಕ ರ್ಯಾಲಿ ನಡೆಸಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರಿಗೆ ರಾಜಿನಾಮೆ ಸಲ್ಲಿಸಲು ಮುಂದಾಗಿದ್ದರು. ಆದರೆ, ಶಿಂಧೆಯವರ ರಾಜೀನಾಮೆಯನ್ನು ಉದ್ಧವ್ ಠಾಕ್ರೆಯವರು ಸ್ವೀಕರಿಸಲು ನಿರಾಕರಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT