ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ವವೀಸ್ (ಸಂಗ್ರಹ ಚಿತ್ರ) 
ದೇಶ

ಶಿವಸೇನೆಯೊಂದು ನಾಟಕದ ಕಂಪನಿ: ದೇವೇಂದ್ರ ಫಡ್ನವೀಸ್

ಬಿಜೆಪಿ ಮೈತ್ರಿ ಪಕ್ಷವಾಗಿರುವ ಶಿವಸೇನೆಯೊಂದು ನಾಟಕದ ಕಂಪನಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ವವೀಸ್ ಅವರು ಶುಕ್ರವಾರ ಹೇಳಿದ್ದಾರೆ...

ಮುಂಬೈ: ಬಿಜೆಪಿ ಮೈತ್ರಿ ಪಕ್ಷವಾಗಿರುವ ಶಿವಸೇನೆಯೊಂದು ನಾಟಕದ ಕಂಪನಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ವವೀಸ್ ಅವರು ಶುಕ್ರವಾರ ಹೇಳಿದ್ದಾರೆ.

ಮಹರಾಷ್ಟ್ರದ ಪಿಡಬ್ಲ್ಯೂಡಿ ಸಚಿವ ಏಕನಾಥ್ ಶಿಂಧೆ ಸಲ್ಲಿಸಿದ್ದ ರಾಜಿನಾಮೆ ಪತ್ರವನ್ನು ಸ್ವೀಕರಿಸಲು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ನಿರಾಕರಿಸಿರುವುದರ ಕುರಿತಂತೆ  ರ್ಯಾಲಿಯೊಂದರಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಶಿವಸೇನೆಯೊಂದು ನಾಟಕದ ಕಂಪನಿಯಿದ್ದಂತೆ. ಕಲ್ಯಾಣ್-ಡೋಂಬಿವಲಿಯಲ್ಲಿನ ಸ್ಥಳೀಯ ಚುನಾವಣೆಯಲ್ಲಿ ಎಲ್ಲಿ ಸೋಲನ್ನು ಅನುಭವಿಸುತ್ತೇವೆಯೇ ಎಂಬ ನಿರಾಶೆಯಲ್ಲಿ ಬಿಜೆಪಿ ಹಾಗೂ ಶಿವಸೇನೆಯಿದೆ ಎಂದು ಹೇಳಿದ್ದಾರೆ.

ಹುಲಿ ಹೆಜ್ಜೆ ಬಗ್ಗೆ ನಮಗೆ ಹೇಳಬೇಡಿ. ನಾವು ಹುಲಿ ಬಾಯಿಯೊಳಗೆ ಕೈ ಹಾಕಿ ಅದರ ಹಲ್ಲಿನ ಸಂಖ್ಯೆ ಎಣಿಸುವವರು ನಾವು. ಶಿಂಧೆ ರಾಜಿನಾಮೆಯೊಂದು ನಾಟಕೀಯ ಬೆಳವಣಿಗೆಯಾಗಿದ್ದು, ಇದರಿಂದ ಯಾರೂ ಭಯ ಪಡಬೇಕಿಲ್ಲ. ಎಂದು ತಮ್ಮ ಬೆಂಬಲಿಕರಿಗೆ ಹೇಳಿದ್ದಾರೆ.

ಮಹಾರಾಷ್ಟ್ರದ ಸರ್ಕಾರ ನನ್ನ ಸಲಹೆಗಳನ್ನು ಸ್ವೀಕರಿಸುತ್ತಿಲ್ಲ ಎಂದು ಆರೋಪ ವ್ಯಕ್ತಪಡಿಸಿದ್ದ ಮಹಾರಾಷ್ಟ್ರದ ಪಿಡಬ್ಸ್ಯೂಡಿ ಸಚಿವ ಏಕನಾಥ್ ಶಿಂಧೆ ಅವರು ಇಂದು ಸಾರ್ವಜನಿಕ ರ್ಯಾಲಿ ನಡೆಸಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರಿಗೆ ರಾಜಿನಾಮೆ ಸಲ್ಲಿಸಲು ಮುಂದಾಗಿದ್ದರು. ಆದರೆ, ಶಿಂಧೆಯವರ ರಾಜೀನಾಮೆಯನ್ನು ಉದ್ಧವ್ ಠಾಕ್ರೆಯವರು ಸ್ವೀಕರಿಸಲು ನಿರಾಕರಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT