ಜಯೇಂದ್ರ ಸರಸ್ವತಿ 
ದೇಶ

ಹಿಂದೂ ಮತ್ತು ಮುಸ್ಲಿಮರು ಒಗ್ಗಟ್ಟಾಗಿರುವ ಸಮಯ ಬಂದಿದೆ: ಜಯೇಂದ್ರ ಸರಸ್ವತಿ

ಹಿಂದೂ ಮತ್ತು ಮುಸ್ಲಿಮರು ಒಂದಾಗಿರುವ ಸಮಯ ಬಂದಿದೆ ಎಂದು ಆರ್ ಎಸ್ ಎಸ್ ಹಾಗೂ ವಿಶ್ವ ಹಿಂದೂ ಪರಿಷತ್...

ನವದೆಹಲಿ: ಹಿಂದೂ ಮತ್ತು ಮುಸ್ಲಿಮರು ಒಂದಾಗಿರುವ ಸಮಯ ಬಂದಿದೆ ಎಂದು ಆರ್ ಎಸ್ ಎಸ್ ಹಾಗೂ ವಿಶ್ವ ಹಿಂದೂ ಪರಿಷತ್ ನಾಯಕರೊಂದಿಗೆ ಆಪ್ತರಾಗಿರುವ ಕಂಚಿ ಕಾಮಕೋಟಿ ಮಠದ 69ನೇ ಪೀಠಾಧಿಪತಿ ಜಯೇಂದ್ರ ಸರಸ್ವತಿ ಹೇಳಿದ್ದಾರೆ.
ಈ ಬಾರಿ ಮುಸ್ಲಿಂ ಮತ್ತು ಹಿಂದೂಗಳು ಒಗ್ಗಟ್ಟಾಗಿ ನಿಲ್ಲುತ್ತಾರೆ. ಎರಡೂ ಧರ್ಮದವರ ಗುರಿ ಒಂದೇ ಎಂದು ತಿಳಿದುಕೊಳ್ಳುತ್ತಿದ್ದಾರೆ, ಹಾಗಾಗಿ, ಎರಡು ಧರ್ಮದವರು ದೇಶದಲ್ಲಿ ಒಗ್ಗಟ್ಟಾಗಿ ನಿಲ್ಲುವ ಸಮಯ ಬಂದಿದೆ ಎಂದು ಅವರು ತಿಳಿಸಿದ್ದಾರೆ. 
ತಮ್ಮಲ್ಲಿರುವ ಭಿನ್ನಭಿಪ್ರಾಯವನ್ನು ಮರೆತು ನಾವೆಲ್ಲರು ಒಂದೇ ಎಂದು ಅರ್ಥ ಮಾಡಿಕೊಳ್ಳಬೇಕು. ರಾಷ್ಟ್ರೀಯ ಏಕತೆ ನಮಗೆ ಮುಖ್ಯವಾಗಿದೆ. ಈಗ ಆ ಸಮಯ ಬರುತ್ತಿದೆ ಎಂದು ಅವರು ಹೇಳಿದ್ದಾರೆ.
ದಾದ್ರಿ ಹತ್ಯೆ ಪ್ರಕರಣ, ಮುಂಬೈನಲ್ಲಿ ಶಿವಸೇನೆಯು ನಡೆಸುತ್ತಿರುವ ದಾಂಧಲೆ ಹಾಗೂ ಸಾಹಿತಿಗಳು ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಾಹಿತಿಗಳು ಪ್ರಶಸ್ತಿ ಹಿಂದಿರುಗಿಸುತ್ತಿರುವುದು ಸರಿಯಲ್ಲ ಎಂದಿದ್ದಾರೆ. 
ಸಾಹಿತಿಗಳು ಈ ಬಗ್ಗೆ ಸರಿಯಾಗಿ ಯೋಚಿಸಬೇಕು. ಪ್ರಶಸ್ತಿ ಹಿಂದಿರುಗಿಸುವ ಬೆಳವಣಿಗೆ ಸರಿಯಲ್ಲ ಎಂದು ಅವರು, ಭಾರತದಲ್ಲಿ ಗೋಹತ್ಯೆಗೆ ಅವಕಾಶ ನೀಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT