ಖ್ಯಾತ ಸಂಗೀತಗಾರ ಝುಬಿನ್ ಮೆಹ್ತಾ (ಸಂಗ್ರಹ ಚಿತ್ರ) 
ದೇಶ

ಭಿನ್ನಾಭಿಪ್ರಾಯಗಳನ್ನು ಸ್ವಾಗತಿಸಬೇಕೇ ವಿನಾ, ನಿರ್ಲಕ್ಷಿಸದಿರಿ: ಮೆಹ್ತಾ

ಪ್ರಶಸ್ತಿಗಳನ್ನು ವಾಪಸ್ ನೀಡುತ್ತಿರುವ ಸಾಹಿತಿಗಳು, ವಿಜ್ಞಾನಿಗಳು, ಕಲಾವಿದರಿಗೆ ಖ್ಯಾತ ಸಂಗೀತಗಾರ ಝುಬಿನ್ ಮೆಹ್ತಾ ಬೆಂಬಲ ವ್ಯಕ್ತಪಡಿಸಿದ್ದಾರೆ...

ನವದೆಹಲಿ: ಪ್ರಶಸ್ತಿಗಳನ್ನು ವಾಪಸ್ ನೀಡುತ್ತಿರುವ ಸಾಹಿತಿಗಳು, ವಿಜ್ಞಾನಿಗಳು, ಕಲಾವಿದರಿಗೆ ಖ್ಯಾತ ಸಂಗೀತಗಾರ ಝುಬಿನ್ ಮೆಹ್ತಾ ಬೆಂಬಲ ವ್ಯಕ್ತಪಡಿಸಿದ್ದಾರೆ.

``ಕಲಾವಿದರ ಅಭಿಪ್ರಾಯಗಳನ್ನು ಸರ್ಕಾರ ಸ್ವಾಗತಿಸ ಬೇಕೇ ವಿನಾ, ಅವುಗಳನ್ನು ನಿರ್ಲಕ್ಷಿಸುವುದು ಸಲ್ಲ. ಭಾರತವು ವಿಶ್ವದ ಅತಿದೊಡ್ಡ ಪ್ರಜಾ ಪ್ರಭುತ್ವ ರಾಷ್ಟ್ರ. ಇಲ್ಲಿ ಸಂಪೂರ್ಣ ಅಬಿsವ್ಯಕ್ತಿ ಸ್ವಾತಂತ್ರ್ಯವಿರಬೇಕು'' ಎಂದಿದ್ದಾರೆ. ಪ್ರಶಸ್ತಿ ವಾಪಸಿಯನ್ನು ನಾನು ಬೆಂಬಲಿ ಸುತ್ತೇನೆ. ಅಂಥ ದಿಟ್ಟ ನಿರ್ಧಾರ ಕೈಗೊಂಡ ಎಲ್ಲರನ್ನೂ ನಾನು ಗೌರವಿಸುತ್ತೇನೆ. ಅವರು ಬೀದಿಗೆ ಬಂದು ಹೋರಾಡಲು ಸಾಧ್ಯವಿಲ್ಲ. ಪ್ರಶಸ್ತಿ ವಾಪಸ್ ನೀಡುವುದೇ ಅವರಿಗಿರುವ ಆಯ್ಕೆ ಎಂದೂ ಹೇಳಿದ್ದಾರೆ ಮೆಹ್ತಾ.

ಜೊತೆಗೆ, ಇಲ್ಲಿ ಸರ್ಕಾರ ಮತ್ತು ಜನರ ನಡುವೆ ಸಂವಹನದ ಕೊರತೆಯಿದೆ. ಸಾಹಿತಿಗಳು ಸರ್ಕಾರದ ಜೊತೆ ಕುಳಿತು, ಮಾತುಕತೆ ನಡೆಸಬೇಕಾದ ಅಗತ್ಯವಿದೆ ಎಂದೂ ಹೇಳಿದ್ದಾರೆ. ಇದೇ ವೇಳೆ, ಮಸಿ ದಾಳಿ ಮತ್ತು ಪಾಕಿಸ್ತಾನಿ ಕ್ರಿಕೆಟಿಗರಿಗೆ ನಿರ್ಬಂಧದಂತಹ ಕ್ರಮಗಳನ್ನು ಅವರು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT