ಕೊಲ್ಕತ್ತಾದಲ್ಲಿ ಸಿಪಿಐ(ಎಂ)- ಟಿಎಂಸಿ ಕಾರ್ಯಕರ್ತರ ನಡುವೆ ಮಾರಾಮಾರಿ(ಎಎನ್ ಐ ಚಿತ್ರ) 
ದೇಶ

ಭಾರತ್ ಬಂದ್: ಟಿಎಂಸಿ- ಸಿಪಿಐ(ಎಂ) ಕಾರ್ಯಕರ್ತರ ನಡುವೆ ಮಾರಾಮಾರಿ

ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಕೋಲ್ಕತ್ತಾದಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಸಿಪಿಐ(ಎಂ) ಹಾಗೂ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.

ಕೋಲ್ಕತ್ತ: ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಕೋಲ್ಕತ್ತಾದಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಸಿಪಿಐ(ಎಂ) ಹಾಗೂ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.   

ಬಹರಾಂಪುರದಲ್ಲಿ ಈ ಘಟನೆ ನಡೆದಿದ್ದು ಬಂದ್ ವೇಳೆ ನಡೆದಿರುವ ಹಲ್ಲೆ ಪ್ರಕರಣದಲ್ಲಿ 6 ಮಂದಿ ಸಿಪಿಐ(ಎಂ) ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂದ್ ವೇಳೆ ನಡೆಯುತ್ತಿದ್ದ ಮೆರವಣಿಗೆ ಮೇಲೆ ತೃಣಮೂಲ ಕಾಂಗ್ರೆಸ್ ನ ಕಾರ್ಯಕರ್ತರು ದಾಳಿ ನಡೆಸಿದ್ದು ತನ್ನ 15 ಜನ ಕಾರ್ಯಕರ್ತರಿಗೆ ಗಾಯಗಳಾಗಿವೆ ಎಂದು ಸಿಪಿಐ(ಎಂ) ಆರೋಪಿಸಿದೆ.

ಬಂದ್ ನ್ನು ಬೆಂಬಲಿಸಿ ನಡೆಸುತ್ತಿದ್ದ ಮೆರವಣಿಗೆ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಸಂಸದ ಮೈನುಲ್ ಹಸನ್ ಸೇರಿದಂತೆ 15 ಜನರು ಗಾಯಗೊಂಡಿದ್ದಾರೆ ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಸಚ್ಚಿದಾನಂದ ಕಂಡಾರಿ ಹೇಳಿದ್ದಾರೆ. ಸಿಪಿಐ(ಎಂ) ಆರೋಪವನ್ನು ತಳ್ಳಿಹಾಕಿರುವ ಟಿಎಂಸಿ, ಸಿಪಿಐ ಕಾರ್ಯಕರ್ತರೇ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್