ಕೊಲ್ಕತ್ತಾದಲ್ಲಿ ಸಿಪಿಐ(ಎಂ)- ಟಿಎಂಸಿ ಕಾರ್ಯಕರ್ತರ ನಡುವೆ ಮಾರಾಮಾರಿ(ಎಎನ್ ಐ ಚಿತ್ರ) 
ದೇಶ

ಭಾರತ್ ಬಂದ್: ಟಿಎಂಸಿ- ಸಿಪಿಐ(ಎಂ) ಕಾರ್ಯಕರ್ತರ ನಡುವೆ ಮಾರಾಮಾರಿ

ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಕೋಲ್ಕತ್ತಾದಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಸಿಪಿಐ(ಎಂ) ಹಾಗೂ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.

ಕೋಲ್ಕತ್ತ: ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಕೋಲ್ಕತ್ತಾದಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಸಿಪಿಐ(ಎಂ) ಹಾಗೂ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.   

ಬಹರಾಂಪುರದಲ್ಲಿ ಈ ಘಟನೆ ನಡೆದಿದ್ದು ಬಂದ್ ವೇಳೆ ನಡೆದಿರುವ ಹಲ್ಲೆ ಪ್ರಕರಣದಲ್ಲಿ 6 ಮಂದಿ ಸಿಪಿಐ(ಎಂ) ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂದ್ ವೇಳೆ ನಡೆಯುತ್ತಿದ್ದ ಮೆರವಣಿಗೆ ಮೇಲೆ ತೃಣಮೂಲ ಕಾಂಗ್ರೆಸ್ ನ ಕಾರ್ಯಕರ್ತರು ದಾಳಿ ನಡೆಸಿದ್ದು ತನ್ನ 15 ಜನ ಕಾರ್ಯಕರ್ತರಿಗೆ ಗಾಯಗಳಾಗಿವೆ ಎಂದು ಸಿಪಿಐ(ಎಂ) ಆರೋಪಿಸಿದೆ.

ಬಂದ್ ನ್ನು ಬೆಂಬಲಿಸಿ ನಡೆಸುತ್ತಿದ್ದ ಮೆರವಣಿಗೆ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಸಂಸದ ಮೈನುಲ್ ಹಸನ್ ಸೇರಿದಂತೆ 15 ಜನರು ಗಾಯಗೊಂಡಿದ್ದಾರೆ ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಸಚ್ಚಿದಾನಂದ ಕಂಡಾರಿ ಹೇಳಿದ್ದಾರೆ. ಸಿಪಿಐ(ಎಂ) ಆರೋಪವನ್ನು ತಳ್ಳಿಹಾಕಿರುವ ಟಿಎಂಸಿ, ಸಿಪಿಐ ಕಾರ್ಯಕರ್ತರೇ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಬರುತ್ತಿದ್ದ ಸರಕು ಹಡಗಿನ ಮೇಲೆ ದಾಳಿ- ಹೊಣೆ ಹೊತ್ತ ಇರಾನ್; ಭಾರತದ ಪ್ರತಿಕ್ರಿಯೆ ಏನು?

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು; ಪ್ರತಿಪಕ್ಷಗಳಿಗೆ ಮುಖಭಂಗ

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ; ಮಾರ್ಚ್ 28 ರಂದು RCB vs SRH

'ರಕ್ಷಿತ್ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!

SCROLL FOR NEXT