ಅರುಣ್ ಜೇಟ್ಲಿ 
ದೇಶ

ಒಆರ್ ಒಪಿ ಜಾರಿ ವಿಳಂಬಕ್ಕೆ ಅರುಣ್ ಜೇಟ್ಲಿ ಕಾರಣ: ನಿವೃತ್ತ ಸೈನಿಕರ ಆಕ್ರೋಶ

ಒಆರ್ ಒಪಿ ಜಾರಿ ವಿಳಂಬಕ್ಕೆ ನಿವೃತ್ತ ಸೈನಿಕರು ಅರುಣ್ ಜೇಟ್ಲಿ ಅವರನ್ನು ಹೊಣೆಗಾರರನ್ನಾಗಿ ಮಾಡಿದ್ದಾರೆ.

ಭೋಪಾಲ್: ಒಆರ್ ಒಪಿ ಜಾರಿ ವಿಳಂಬಕ್ಕೆ ನಿವೃತ್ತ ಸೈನಿಕರು ಅರುಣ್ ಜೇಟ್ಲಿ ಅವರನ್ನು ಹೊಣೆಗಾರರನ್ನಾಗಿ ಮಾಡಿದ್ದಾರೆ.

ಒನ್ ರ್ಯಾಂಕ್ ಒನ್ ಪೆನ್ಷನ್ ವಾರ್ಷಿಕ ಪರಿಷ್ಕರಣೆ ಬಗ್ಗೆ ಮಾತನಾಡಿದ್ದ ಅರುಣ್ ಜೇಟ್ಲಿ, ನಿವೃತ್ತ ಸೈನಿಕರ ಪಿಂಚಣಿಯನ್ನು ವಾರ್ಷಿಕವಾಗಿ ಪರಿಷ್ಕರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು, ಜೇಟ್ಲಿ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸೈನಿಕರು, ಒಆರ್ ಒಪಿ ಜಾರಿ ವಿಳಂಬವಾಗಲು ಹಣಕಾಸು ಸಚಿವ ಅರುಣ್ ಜೇಟ್ಲಿಯೇ ಕಾರಣ ಎಂದು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಮಗೆ ಯಾವುದೇ ತಕರಾರಿಲ್ಲ.  ಆದರೆ ಒಆರ್ ಒಪಿ ವಿಷಯದಲ್ಲಿ ಪ್ರಧಾನಿ ಏಕೆ ಮೌನವಾಗಿದ್ದಾರೆ ಎಂಬುದು ನಮಗೆ ತಿಳಿಯುತ್ತಿಲ್ಲ ಎಂದು ನಿವೃತ್ತ ಬ್ರಿಗೇಡಿಯರ್ ವಿನಾಯಕ್ ಹೇಳಿದ್ದಾರೆ. ಆದರೆ ಅರುಣ್ ಜೇಟ್ಲಿ ಅವರ ಹೇಳಿಕೆ ಗಮನಿಸಿದರೆ, ಕೇಂದ್ರ ಸರ್ಕಾರ ಒಆರ್ ಒಪಿ ಜಾರಿ ಮಾಡುವ ಪರವಾಗಿಲ್ಲ ಎಂದು ವಿನಾಯಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಆರ್ ಒಪಿ ಜಾರಿಗೊಳಿಸುವುದರೊಂದಿಗೆ ನಿವೃತ್ತ ಸೈನಿಕರ ಪಿಂಚಣಿಯನ್ನು ವಾರ್ಷಿಕವಾಗಿ ಪರಿಷ್ಕರಣೆ ಮಾಡಬೇಕು ಎಂಬುದು ಪ್ರತಿಭಟನಾ ನಿರತ ನಿವೃತ್ತ ಸೈನಿಕರ ಆಗ್ರಹವಾಗಿದೆ. ಆದರೆ ಈ ಸಾಧ್ಯತೆಯನ್ನು ತಳ್ಳಿಹಾಕಿದ್ದ ಅರುಣ್ ಜೇಟ್ಲಿ, ಸೈನಿಕರ ಪಿಂಚಣಿಯನ್ನು ವಾರ್ಷಿಕವಾಗಿ ಪರಿಷ್ಕರಿಸುವ ಉದಾಹರಣೆಗಳು ಎಲ್ಲಿಯೂ ಇಲ್ಲ ಆದ್ದರಿಂದ ವಾರ್ಷಿಕ ಪರಿಷ್ಕರಣೆ ಅಸಾಧ್ಯ ಎಂದು ಹೇಳಿದ್ದರು.

ಸರ್ಕಾರ ಬೇಡಿಕೆ ಈಡೇರಿಸುವವರೆಗೂ ಶಾಂತಿಯುತ ಪ್ರತಿಭಟನೆ ಮುಂದುವರೆಸುವುದಾಗಿ ಹೇಳಿರುವ ನಿವೃತ್ತ ಸೈನಿಕರು, ಹಿಂದಿ ಸಮ್ಮೇಳನಕ್ಕೆ ಭೋಪಾಲ್ ಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸೇನಾ ಮುಖ್ಯಸ್ಥ, ಕೇಂದ್ರ ಸಚಿವ ವಿ.ಕೆ ಸಿಂಗ್ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT