ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ (ಸಂಗ್ರಹ ಚಿತ್ರ) 
ದೇಶ

ಕಲ್ಲಿದ್ದಲು ಹಗರಣ ಬಗ್ಗೆ ಮನಮೋಹನ್ ಸಿಂಗ್ ಗೆ ಎಲ್ಲವೂ ತಿಳಿದಿತ್ತು; ಮಧುಕೋಡ

ಬಹುಕೋಟಿ ಕಲ್ಲಿದ್ದಲು ಹಗರಣ ಕುರಿತಂತೆ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಎಲ್ಲವೂ ತಿಳಿದಿತ್ತು ಎಂದು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡ ಅವರು ಬುಧವಾರ ಹೇಳಿದ್ದಾರೆ...

ನವದೆಹಲಿ: ಬಹುಕೋಟಿ ಕಲ್ಲಿದ್ದಲು ಹಗರಣ ಕುರಿತಂತೆ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಎಲ್ಲವೂ ತಿಳಿದಿತ್ತು ಎಂದು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡ ಅವರು ಬುಧವಾರ ಹೇಳಿದ್ದಾರೆ.

ಈ ಕುರಿತಂತೆ ನಿನ್ನೆ ವಿಶೇಷ ನ್ಯಾಯಾಲಯದಲ್ಲಿ ಹೇಳಿಕೆ ನೀಡಿರುವ ಅವರು, ಹಗರಣ ನಡೆದ ಸಂದರ್ಭದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೇ ಕಲ್ಲಿದ್ದಲು ಸಚಿವರಾಗಿದ್ದರು. ಜಾರ್ಖಂಡಿನಲ್ಲಿ ಅಮರ ಖಂಡ ಮುರ್ಗಂದಗಲ್ ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ಹಗರಣ ನಡೆದಿರುವುದೇ ಸತ್ಯವಾದರೆ, ಈ ಹಗರಣ ಮನಮೋಹನ್ ಸಿಂಗ್ ಅವರಿಗೆ ತಿಳಿಯದೇ ನಡೆದಿರುವುದಕ್ಕೆ ಸಾಧ್ಯವೇ ಇಲ್ಲ. ಹಾಗಾಗಿ ಮನಮೋಹನ್ ಸಿಂಗ್ ಅವರನ್ನು ವಿಚಾರಣಗೊಳಪಡಿಸಬೇಕೆಂದು ಹೇಳಿಕೊಂಡಿದ್ದಾರೆ.

ಅಂದು ಕಲ್ಲಿದ್ದಲು ಸಚಿವರಾಗಿದ್ದ ಮನಮೋಹನ್ ಸಿಂಗ್ ಅವರಿಗೆ ಹಗರಣ ಬಗ್ಗೆ ಎಲ್ಲಾ ಮಾಹಿತಿ ತಿಳಿದಿದ್ದು, ಸಿಬಿಐ ಹೇಳಿರುವಂತೆ ಅಕ್ರ ನಡೆದಿದ್ದೇ ಆದರೆ, ಅದು ಕಲ್ಲಿದ್ದಲು ಸಚಿವರ ಅರಿವಿಗೆ ಬರದೆ ಸಂಪೂರ್ಣಗೊಳ್ಳಲು ಸಾಧ್ಯವಿಲ್ಲ ಎಂದು ಮಧುಕೋಡಾ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹೇಳಿದ್ದಾರೆ.

ಕಲ್ಲಿದ್ದಲು ಹಗರಣ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಕಾಂಗ್ರೆಸ್ ಮುಖಂಡ, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡ, ಉದ್ಯಮಿ ನವೀನ್ ಜಿಂದಾಲ್ ಹಾಗೂ ಇತರೆ 13 ಮಂದಿಯ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಆರೋಪ ಪಟ್ಟಿ ಸಲ್ಲಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?