ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ (ಸಂಗ್ರಹ ಚಿತ್ರ) 
ದೇಶ

ಕಲ್ಲಿದ್ದಲು ಹಗರಣ ಬಗ್ಗೆ ಮನಮೋಹನ್ ಸಿಂಗ್ ಗೆ ಎಲ್ಲವೂ ತಿಳಿದಿತ್ತು; ಮಧುಕೋಡ

ಬಹುಕೋಟಿ ಕಲ್ಲಿದ್ದಲು ಹಗರಣ ಕುರಿತಂತೆ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಎಲ್ಲವೂ ತಿಳಿದಿತ್ತು ಎಂದು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡ ಅವರು ಬುಧವಾರ ಹೇಳಿದ್ದಾರೆ...

ನವದೆಹಲಿ: ಬಹುಕೋಟಿ ಕಲ್ಲಿದ್ದಲು ಹಗರಣ ಕುರಿತಂತೆ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಎಲ್ಲವೂ ತಿಳಿದಿತ್ತು ಎಂದು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡ ಅವರು ಬುಧವಾರ ಹೇಳಿದ್ದಾರೆ.

ಈ ಕುರಿತಂತೆ ನಿನ್ನೆ ವಿಶೇಷ ನ್ಯಾಯಾಲಯದಲ್ಲಿ ಹೇಳಿಕೆ ನೀಡಿರುವ ಅವರು, ಹಗರಣ ನಡೆದ ಸಂದರ್ಭದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೇ ಕಲ್ಲಿದ್ದಲು ಸಚಿವರಾಗಿದ್ದರು. ಜಾರ್ಖಂಡಿನಲ್ಲಿ ಅಮರ ಖಂಡ ಮುರ್ಗಂದಗಲ್ ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ಹಗರಣ ನಡೆದಿರುವುದೇ ಸತ್ಯವಾದರೆ, ಈ ಹಗರಣ ಮನಮೋಹನ್ ಸಿಂಗ್ ಅವರಿಗೆ ತಿಳಿಯದೇ ನಡೆದಿರುವುದಕ್ಕೆ ಸಾಧ್ಯವೇ ಇಲ್ಲ. ಹಾಗಾಗಿ ಮನಮೋಹನ್ ಸಿಂಗ್ ಅವರನ್ನು ವಿಚಾರಣಗೊಳಪಡಿಸಬೇಕೆಂದು ಹೇಳಿಕೊಂಡಿದ್ದಾರೆ.

ಅಂದು ಕಲ್ಲಿದ್ದಲು ಸಚಿವರಾಗಿದ್ದ ಮನಮೋಹನ್ ಸಿಂಗ್ ಅವರಿಗೆ ಹಗರಣ ಬಗ್ಗೆ ಎಲ್ಲಾ ಮಾಹಿತಿ ತಿಳಿದಿದ್ದು, ಸಿಬಿಐ ಹೇಳಿರುವಂತೆ ಅಕ್ರ ನಡೆದಿದ್ದೇ ಆದರೆ, ಅದು ಕಲ್ಲಿದ್ದಲು ಸಚಿವರ ಅರಿವಿಗೆ ಬರದೆ ಸಂಪೂರ್ಣಗೊಳ್ಳಲು ಸಾಧ್ಯವಿಲ್ಲ ಎಂದು ಮಧುಕೋಡಾ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹೇಳಿದ್ದಾರೆ.

ಕಲ್ಲಿದ್ದಲು ಹಗರಣ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಕಾಂಗ್ರೆಸ್ ಮುಖಂಡ, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡ, ಉದ್ಯಮಿ ನವೀನ್ ಜಿಂದಾಲ್ ಹಾಗೂ ಇತರೆ 13 ಮಂದಿಯ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಆರೋಪ ಪಟ್ಟಿ ಸಲ್ಲಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT