ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ (ಸಂಗ್ರಹ ಚಿತ್ರ) 
ದೇಶ

ಕಲ್ಲಿದ್ದಲು ಹಗರಣ ಬಗ್ಗೆ ಮನಮೋಹನ್ ಸಿಂಗ್ ಗೆ ಎಲ್ಲವೂ ತಿಳಿದಿತ್ತು; ಮಧುಕೋಡ

ಬಹುಕೋಟಿ ಕಲ್ಲಿದ್ದಲು ಹಗರಣ ಕುರಿತಂತೆ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಎಲ್ಲವೂ ತಿಳಿದಿತ್ತು ಎಂದು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡ ಅವರು ಬುಧವಾರ ಹೇಳಿದ್ದಾರೆ...

ನವದೆಹಲಿ: ಬಹುಕೋಟಿ ಕಲ್ಲಿದ್ದಲು ಹಗರಣ ಕುರಿತಂತೆ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಎಲ್ಲವೂ ತಿಳಿದಿತ್ತು ಎಂದು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡ ಅವರು ಬುಧವಾರ ಹೇಳಿದ್ದಾರೆ.

ಈ ಕುರಿತಂತೆ ನಿನ್ನೆ ವಿಶೇಷ ನ್ಯಾಯಾಲಯದಲ್ಲಿ ಹೇಳಿಕೆ ನೀಡಿರುವ ಅವರು, ಹಗರಣ ನಡೆದ ಸಂದರ್ಭದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೇ ಕಲ್ಲಿದ್ದಲು ಸಚಿವರಾಗಿದ್ದರು. ಜಾರ್ಖಂಡಿನಲ್ಲಿ ಅಮರ ಖಂಡ ಮುರ್ಗಂದಗಲ್ ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ಹಗರಣ ನಡೆದಿರುವುದೇ ಸತ್ಯವಾದರೆ, ಈ ಹಗರಣ ಮನಮೋಹನ್ ಸಿಂಗ್ ಅವರಿಗೆ ತಿಳಿಯದೇ ನಡೆದಿರುವುದಕ್ಕೆ ಸಾಧ್ಯವೇ ಇಲ್ಲ. ಹಾಗಾಗಿ ಮನಮೋಹನ್ ಸಿಂಗ್ ಅವರನ್ನು ವಿಚಾರಣಗೊಳಪಡಿಸಬೇಕೆಂದು ಹೇಳಿಕೊಂಡಿದ್ದಾರೆ.

ಅಂದು ಕಲ್ಲಿದ್ದಲು ಸಚಿವರಾಗಿದ್ದ ಮನಮೋಹನ್ ಸಿಂಗ್ ಅವರಿಗೆ ಹಗರಣ ಬಗ್ಗೆ ಎಲ್ಲಾ ಮಾಹಿತಿ ತಿಳಿದಿದ್ದು, ಸಿಬಿಐ ಹೇಳಿರುವಂತೆ ಅಕ್ರ ನಡೆದಿದ್ದೇ ಆದರೆ, ಅದು ಕಲ್ಲಿದ್ದಲು ಸಚಿವರ ಅರಿವಿಗೆ ಬರದೆ ಸಂಪೂರ್ಣಗೊಳ್ಳಲು ಸಾಧ್ಯವಿಲ್ಲ ಎಂದು ಮಧುಕೋಡಾ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹೇಳಿದ್ದಾರೆ.

ಕಲ್ಲಿದ್ದಲು ಹಗರಣ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಕಾಂಗ್ರೆಸ್ ಮುಖಂಡ, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡ, ಉದ್ಯಮಿ ನವೀನ್ ಜಿಂದಾಲ್ ಹಾಗೂ ಇತರೆ 13 ಮಂದಿಯ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಆರೋಪ ಪಟ್ಟಿ ಸಲ್ಲಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT