ಗ್ಲೋಬಲ್ ಹಿಂದು ಬುದ್ದಿಸ್ಟ್ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾತನಾಡುತ್ತಿರುವುದು (ಫೋಟೋ ಕೃಪೆ: ಎಎನ್ಐ) 
ದೇಶ

ಚರ್ಚೆಗಳಿಂದ ಎಲ್ಲಾ ಸಮಸ್ಯೆಗೂ ಪರಿಹಾರ ಸಾಧ್ಯ: ಪ್ರಧಾನಿ ಮೋದಿ

ಪ್ರಪಂಚದಲ್ಲಿ ಸೃಷ್ಠಿಯಾಗುತ್ತಿರುವ ಹಿಂಸೆಯ ವಿರುದ್ಧ ಶಾಂತಿ ಎಂಬ ಮಂತ್ರ ಪಠಿಸಬೇಕಿದ್ದು, ಚರ್ಚೆಗಳಿಂದ ಎಲ್ಲಾ ಸಮಸ್ಯೆಗಳಿಗು ಪರಿಹಾರವಿದೆ ಎಂದು ನನಗೆ ದೃಢ ವಿಶ್ವಾಸವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ...

ನವದೆಹಲಿ: ಪ್ರಪಂಚದಲ್ಲಿ ಸೃಷ್ಠಿಯಾಗುತ್ತಿರುವ ಹಿಂಸೆಯ ವಿರುದ್ಧ ಶಾಂತಿ ಎಂಬ ಮಂತ್ರ ಪಠಿಸಬೇಕಿದ್ದು, ಚರ್ಚೆಗಳಿಂದ ಎಲ್ಲಾ ಸಮಸ್ಯೆಗಳಿಗು ಪರಿಹಾರವಿದೆ ಎಂದು ನನಗೆ ದೃಢ ವಿಶ್ವಾಸವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ.

ನವದೆಹಲಿಯಲ್ಲಿ ನಡೆಯುತ್ತಿರುವ ಗ್ಲೋಬಲ್ ಹಿಂದು ಬುದ್ದಿಸ್ಟ್ ಕಾನ್ ಕ್ಲೇವ್ ಸಭೆಯಲ್ಲಿ ಮಾತನಾಡಿರುವ ಅವರು, ಬುದ್ಧನ ಆದರ್ಶಗಳು ಹಾಗೂ ಅವರು ನಡೆಯುತ್ತಿದ್ದ ಹಾದಿಯನ್ನು ನೋಡಿದರೆ ಈ ಶತಮಾನವನ್ನು ಏಷ್ಯನ್ ಶತಮಾನವೆಂದು ಕರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಈ ರೀತಿಯ ಸಭೆಗಳಿಗೆ ನನ್ನನ್ನು ಆಹ್ವಾನಿಸಿದ್ದು ನನ್ನ ಅದೃಷ್ಟ. ನಮ್ಮ ನಾಡಿನ ಗೌತಮ ಬುದ್ಧ ಬೌದ್ಧ ಧರ್ಮದ ಸಂದೇಶವನ್ನು ಜಗತ್ತಿಗೆ ಸಾರಿದ. ಇದು ಭಾರತೀಯರು ಹೆಮ್ಮೆ ಪಡುವಂತಹ ಸಂಗತಿ. ಬುದ್ಧನ ಜೀವನ ಸೇವೆ, ತ್ಯಾಗ ಮತ್ತು ಸಹಾನುಭೂತಿಯ ಶಕ್ತಿಯನ್ನು ಸಾರಿದೆ. ಬುದ್ಧನ ತತ್ವಗಳನ್ನು ಪ್ರತಿಯೊಬ್ಬರು ಪರಿಪಾಲಿಸಬೇಕಿದ್ದು, ಚರ್ಚೆಗಳಿಂದ ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿರುವುದೆ ಎಂಬುದರ ಬಗ್ಗೆ ನನಗೆ ಧೃಢ ನಂಬಿಕೆ ಇದೆ.

ಬೌದ್ಧ ಧರ್ಮ ಹಾಗೂ ಹವಾಮಾನಗಳು ಒಂದಕ್ಕೊಂದು ಸಂಬಂಧವನ್ನು ಹೊಂದಿದ್ದು, ಬೌದ್ಧರ ದೃಷ್ಠಿಕೋನದ ಪ್ರಕಾರ ಯಾವುದೂ ಪ್ರತ್ಯೇಕತೆಯನ್ನು ಹೊಂದಿರುವುದಿಲ್ಲ. ಆಸ್ತಿ ಮಾಡುವುದು, ಸಂಪತ್ತು ಗಳಿಸುವುದು ಕೇವಲ ಜೀವನ ಏಕಮಾತ್ರ ಉದ್ದೇಶಕ್ಕಲ್ಲ ಎಂಬುದನ್ನು ಬುದ್ಧ ಸಾರಿದ್ದಾನೆ. ಹವಾಮಾನ ವೈಪರೀತ್ಯ ಈಗಿನ ದೊಡ್ಡ ಸವಾಲಾಗಿದ್ದು, ಈ ಬಗ್ಗೆ ನಾನು ಬರೆದ ಪುಸ್ತಕವೊಂದನ್ನು ದಿವಂಗತ ಎಪಿಜೆ ಅಬ್ದುಲ್ ಕಲಾಂ ಅವರೇ  ಬಿಡುಗಡೆ ಮಾಡಿದ್ದರು ಎಂದು ಇದೇ ವೇಳೆ ಸ್ಮರಿಸಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT