ಗ್ಲೋಬಲ್ ಹಿಂದು ಬುದ್ದಿಸ್ಟ್ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾತನಾಡುತ್ತಿರುವುದು (ಫೋಟೋ ಕೃಪೆ: ಎಎನ್ಐ) 
ದೇಶ

ಚರ್ಚೆಗಳಿಂದ ಎಲ್ಲಾ ಸಮಸ್ಯೆಗೂ ಪರಿಹಾರ ಸಾಧ್ಯ: ಪ್ರಧಾನಿ ಮೋದಿ

ಪ್ರಪಂಚದಲ್ಲಿ ಸೃಷ್ಠಿಯಾಗುತ್ತಿರುವ ಹಿಂಸೆಯ ವಿರುದ್ಧ ಶಾಂತಿ ಎಂಬ ಮಂತ್ರ ಪಠಿಸಬೇಕಿದ್ದು, ಚರ್ಚೆಗಳಿಂದ ಎಲ್ಲಾ ಸಮಸ್ಯೆಗಳಿಗು ಪರಿಹಾರವಿದೆ ಎಂದು ನನಗೆ ದೃಢ ವಿಶ್ವಾಸವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ...

ನವದೆಹಲಿ: ಪ್ರಪಂಚದಲ್ಲಿ ಸೃಷ್ಠಿಯಾಗುತ್ತಿರುವ ಹಿಂಸೆಯ ವಿರುದ್ಧ ಶಾಂತಿ ಎಂಬ ಮಂತ್ರ ಪಠಿಸಬೇಕಿದ್ದು, ಚರ್ಚೆಗಳಿಂದ ಎಲ್ಲಾ ಸಮಸ್ಯೆಗಳಿಗು ಪರಿಹಾರವಿದೆ ಎಂದು ನನಗೆ ದೃಢ ವಿಶ್ವಾಸವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ.

ನವದೆಹಲಿಯಲ್ಲಿ ನಡೆಯುತ್ತಿರುವ ಗ್ಲೋಬಲ್ ಹಿಂದು ಬುದ್ದಿಸ್ಟ್ ಕಾನ್ ಕ್ಲೇವ್ ಸಭೆಯಲ್ಲಿ ಮಾತನಾಡಿರುವ ಅವರು, ಬುದ್ಧನ ಆದರ್ಶಗಳು ಹಾಗೂ ಅವರು ನಡೆಯುತ್ತಿದ್ದ ಹಾದಿಯನ್ನು ನೋಡಿದರೆ ಈ ಶತಮಾನವನ್ನು ಏಷ್ಯನ್ ಶತಮಾನವೆಂದು ಕರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಈ ರೀತಿಯ ಸಭೆಗಳಿಗೆ ನನ್ನನ್ನು ಆಹ್ವಾನಿಸಿದ್ದು ನನ್ನ ಅದೃಷ್ಟ. ನಮ್ಮ ನಾಡಿನ ಗೌತಮ ಬುದ್ಧ ಬೌದ್ಧ ಧರ್ಮದ ಸಂದೇಶವನ್ನು ಜಗತ್ತಿಗೆ ಸಾರಿದ. ಇದು ಭಾರತೀಯರು ಹೆಮ್ಮೆ ಪಡುವಂತಹ ಸಂಗತಿ. ಬುದ್ಧನ ಜೀವನ ಸೇವೆ, ತ್ಯಾಗ ಮತ್ತು ಸಹಾನುಭೂತಿಯ ಶಕ್ತಿಯನ್ನು ಸಾರಿದೆ. ಬುದ್ಧನ ತತ್ವಗಳನ್ನು ಪ್ರತಿಯೊಬ್ಬರು ಪರಿಪಾಲಿಸಬೇಕಿದ್ದು, ಚರ್ಚೆಗಳಿಂದ ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿರುವುದೆ ಎಂಬುದರ ಬಗ್ಗೆ ನನಗೆ ಧೃಢ ನಂಬಿಕೆ ಇದೆ.

ಬೌದ್ಧ ಧರ್ಮ ಹಾಗೂ ಹವಾಮಾನಗಳು ಒಂದಕ್ಕೊಂದು ಸಂಬಂಧವನ್ನು ಹೊಂದಿದ್ದು, ಬೌದ್ಧರ ದೃಷ್ಠಿಕೋನದ ಪ್ರಕಾರ ಯಾವುದೂ ಪ್ರತ್ಯೇಕತೆಯನ್ನು ಹೊಂದಿರುವುದಿಲ್ಲ. ಆಸ್ತಿ ಮಾಡುವುದು, ಸಂಪತ್ತು ಗಳಿಸುವುದು ಕೇವಲ ಜೀವನ ಏಕಮಾತ್ರ ಉದ್ದೇಶಕ್ಕಲ್ಲ ಎಂಬುದನ್ನು ಬುದ್ಧ ಸಾರಿದ್ದಾನೆ. ಹವಾಮಾನ ವೈಪರೀತ್ಯ ಈಗಿನ ದೊಡ್ಡ ಸವಾಲಾಗಿದ್ದು, ಈ ಬಗ್ಗೆ ನಾನು ಬರೆದ ಪುಸ್ತಕವೊಂದನ್ನು ದಿವಂಗತ ಎಪಿಜೆ ಅಬ್ದುಲ್ ಕಲಾಂ ಅವರೇ  ಬಿಡುಗಡೆ ಮಾಡಿದ್ದರು ಎಂದು ಇದೇ ವೇಳೆ ಸ್ಮರಿಸಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!