ಆಂಧ್ರ ವಿಧಾನಸಭೆ( ಸಂಗ್ರಹ ಚಿತ್ರ) 
ದೇಶ

ವೋಟಿಗಾಗಿ ನೋಟು ಪ್ರಕರಣ: ಅಂಧ್ರ ವಿಧಾನಸಭೆಯಲ್ಲಿ ಕೋಲಾಹಲ

ವೋಟಿಗಾಗಿ ನೋಟು ಪ್ರಕರಣ ಆಂಧ್ರ ಪ್ರದೇಶ ವಿಧಾನ ಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದೆ....

ಹೈದರಾಬಾದ್: ವೋಟಿಗಾಗಿ ನೋಟು ಪ್ರಕರಣ ಆಂಧ್ರ ಪ್ರದೇಶ ವಿಧಾನ ಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದೆ. ಪ್ರಶ್ನೋತ್ತರ ವೇಳೆ ಪ್ರತಿಪಕ್ಷ ವೈಎಸ್ ಆರ್ ಕಾಂಗ್ರೆಸ್ ಗದ್ದಲ ಆರಂಭಿಸಿತು.  

ವಿಧಾನಸಭೆ ಸ್ಪೀಕರ್ ಕೆ. ಶಿವಪ್ರಸಾದ ರಾವ್ 2 ಬಾರಿ ಸದನವನ್ನು ಮುಂದೂಡಿದ್ರು. ವೈಎಸ್ ಆರ್ ಕಾಂಗ್ರೆಸ್ ಸದಸ್ಯರು ಪ್ರಕಣ ಸಂಬಂಧ ಚರ್ಚೆ ನಡೆಸುವಂತೆ ಸ್ಪೀಕರ್ ಗೆ ಮನವಿ ಮಾಡಿದರು. ಆದರೆ ಇದಕ್ಕೆ ಸ್ಪೀಕರ್ ಸಮ್ಮತಿಸಲಿಲ್ಲ.  ವೈಎಸ್ ಆರ್ ಕಾಂಗ್ರೆಸ್ ಶಾಸಕರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.  ಹೀಗಾಗಿ ವಿಧಾನಸಭೆಯಲ್ಲಿ ತೀವ್ರ ಗದ್ದಲ- ಕೋಲಾಹಲ ಏರ್ಪಟ್ಟು ಕಲಾಪವನ್ನು ಮುಂದೂಡಲಾಯಿತು.

ಸರ್ಕಾರದ ಮುಖ್ಯ ಸಚೇತಕ ಕೆ. ಶ್ರೀನಿವಾಸಲು ಮಾತನಾಡಿ, ಈ ಪ್ರಕರಣ ಆಂಧ್ರ ಪ್ರದೇಶಕ್ಕೆ ಸಂಬಂಧಿಸಿದ್ದಲ್ಲ, ಹೀಗಾಗಿ ಚರ್ಚೆಮಾಡಿ ಅನಗತ್ಯವಾಗಿ ಸಮಯ ವ್ಯರ್ಥ ಮಾಡುವುದು ಸರಿಯಲ್ಲ ಎಂದು ತಿಳಿಸಿದರು. ಇದರಿಂದ ಆಕ್ರೋಶಗೊಂಡ ವಿಪಕ್ಷ ಸದಸ್ಯರು ಸದದ ಬಾವಿಗಿಳಿದು ಸರ್ಕಾರದ ವಿರುದ್ಧ ಘೋಶಣೆ ಕೂಗಿದರು. ಇದಾದ ನಂತರ ಸ್ಪೀಕರ್ ಸದನವನ್ನು ಮುಂದೂಡಿದರು.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT