ಅಮರ್ ಸಿಂಗ್ 
ದೇಶ

ಬಿಲ್ ಕ್ಲಿಂಟನ್ ಫೌಂಡೇಶನ್ ಗೆ ಅಮರ್ ಸಿಂಗ್ ದೇಣಿಗೆ: ವರದಿ ಕೇಳಿದ ಕೋರ್ಟ್

ಬಿಲ್ ಕ್ಲಿಂಟನ್ ಫೌಂಡೇಶನ್ ಗೆ ಸಮಾಜವಾದಿ ಪಕ್ಷದ ಮುಖಂಡ ಅಮರ್ ಸಿಂಗ್ ನೀಡಿರುವ 25 ಕೋಟಿ ರೂ ದೇಣಿಗೆ ಸಂಬಂಧ ವಿವರವಾದ ವರದಿ ನೀಡುವಂತೆ ...

ಲಕ್ನೋ: ಬಿಲ್ ಕ್ಲಿಂಟನ್ ಫೌಂಡೇಶನ್ ಗೆ ಸಮಾಜವಾದಿ ಪಕ್ಷದ ಮುಖಂಡ ಅಮರ್ ಸಿಂಗ್ ನೀಡಿರುವ 25 ಕೋಟಿ ರೂ ದೇಣಿಗೆ ಸಂಬಂಧ ವಿವರವಾದ ವರದಿ ನೀಡುವಂತೆ ಅಲಹಾಬಾದ್ ಹೈಕೋರ್ಟ್ ಜಾರಿ ನಿರ್ದೇಶಾನಾಲಯಕ್ಕೆ ಸೂಚಿಸಿದೆ.

ಹಣ ನೀಡಿರುವ ಸಂಬಂಧ ಸಂಪೂರ್ಣ ವರದಿ ನೀಡಲು ಜಾರಿ ನಿರ್ದೇಶಾನಾಲಯಕ್ಕೆ ಕೋರ್ಟ್ 4 ವಾರಗಳ ಗಡುವು ನೀಡಿದೆ. ಅಮರ್ ಸಿಂಗ್ ಬಿಲ್ ಕ್ಲಿಂಟನ್ ಫೌಂಡೇಶನ್ ಗೆ 25 ಕೋಟಿ ಹಣ ನೀಡಿದ್ದರ ಸಂಬಂಧ ವಕೀಲ ಅಶೋಕ್ ಸಿಂಗ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಸಿಬಿಐ ನಿರ್ದೇಶಕರನ್ನು ಪ್ರಶ್ನಿಸಿದೆ.

2011 ರಲ್ಲಿ ಅಮರ್ ಸಿಂಗ್ ವಿರುದ್ಧಹಣ ದುರುಪಯೋಗ ಸಂಬಂಧ ದೂರು ದಾಖಲಾಗಿತ್ತು. ಅವರ ವಿರುದ್ಧ ಕ್ರಮ ಕೈಗೊಳ್ಳಲು ಹೈ ಕೋರ್ಟ್ ಸೂಚಿಸಿತ್ತು. ಆದರೆ ನಂತರ ಅಧಿಕಾರಕ್ಕೆ ಬಂದ ಸಮಾಜವಾದಿ ಪಕ್ಷ ಪ್ರಕರಣವನ್ನು ಮುಚ್ಚಿ ಹಾಕಿತ್ತು.

ನಂತರ ಅರ್ಜಿದಾರ ಅಶೋಕ್ ಸಿಂಗ್ ಕೇಸನ್ನು ವಾಪಸ್ ತೆಗೆದುಕೊಳ್ಳುವುದಾಗಿ ಮನವಿ ಮಾಡಿದ್ದರು, ಆದರೆ ನ್ಯಾಯಮೂರ್ತಿ ಚಂದ್ರ ಚೂಡ್ ಅವರನ್ನೊಳಗೊಂಡ ನ್ಯಾಯಪೀಠ ಅಶೋಕ್ ಸಿಂಗ್ ಅವರ ಮನವಿಯನ್ನು ತಿರಸ್ಕರಿಸಿತ್ತು. ನಂತರ ವಿಚಾರಣೆ ನಡೆಸಿದ ಅಲಹಬಾದ್ ಹೈ ಕೋರ್ಟ್ ಅಕ್ಟೋಬರ್ 4 ಕ್ಕೆ ವಿಚಾರಣೆ ಮುಂದೂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT