ಹುತಾತ್ಮ ಯೋಧ ಮೋಹನ್ ನಾಥ್ ಗೋಸ್ವಾಮಿ 
ದೇಶ

11 ದಿನಗಳಲ್ಲಿ 11 ಉಗ್ರರ ಹತ್ಯೆ: ಕಾಶ್ಮೀರದಲ್ಲಿ ಹುತಾತ್ಮ ಸೈನಿಕನೊಬ್ಬನ ಸಾಹಸಗಾಥೆ

ಸೈನಿಕರೆಂದರೆ ಸಾಲು ಸಾಲು ಸಾಹಸಗಾಥೆಗಳು ಕಣ್ಮುಂದೆ ಬಂದು ನಿಲ್ಲುತ್ತವೆ. ಉಗ್ರರ ವಿರುದ್ಧ ಹೋರಾಡಿದ ಜಮ್ಮು-ಕಾಶ್ಮೀರದ ಯೋಧನ ಸಾಹಸಗಾಥೆಯೊಂದು ಇಲ್ಲಿದೆ.

ಶ್ರೀನಗರ: ಸೈನಿಕರೆಂದರೆ ಸಾಲು ಸಾಲು ಸಾಹಸಗಾಥೆಗಳು ಕಣ್ಮುಂದೆ ಬಂದು ನಿಲ್ಲುತ್ತವೆ. ಉಗ್ರರ ವಿರುದ್ಧ ಹೋರಾಡಿದ ಜಮ್ಮು-ಕಾಶ್ಮೀರದ ಯೋಧನ ಸಾಹಸಗಾಥೆಯೊಂದು ಇಲ್ಲಿದೆ.

ಭಾರತೀಯ ಸೇನೆಯ ವಿಶೇಷ  ಕಮಾಂಡೋ ಪಡೆಯ ಮೋಹನ್ ನಾಥ್ ಗೋಸ್ವಾಮಿ ಸಾವನ್ನಪ್ಪುವುದಕ್ಕೂ ಮುನ್ನ 10 ಉಗ್ರರನ್ನು ಹತ್ಯೆ ಮಾಡಿ ಪ್ರಾಣತ್ಯಾಗ ಮಾಡಿದ್ದಾರೆ. ಸತತ 11 ದಿನಗಳು ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಲಷ್ಕರ್ ಸಂಘಟನೆಯ 10  ಉಗ್ರರನ್ನು ಹೊಡೆದುರುಳಿಸಿದ ಖ್ಯಾತಿ ಮೋಹನ್ ನಾಥ್ ಗೋಸ್ವಾಮಿ ಅವರದ್ದು.

ಕಾಶ್ಮೀರ ಕಣಿವೆಯಲ್ಲಿ ನಡೆಯುತ್ತಿದ್ದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮೋಹನ್ ನಾಥ್ ಗೋಸ್ವಾಮಿ ಸಕ್ರಿಯವಾಗಿದ್ದರು. ಭಯೋತ್ಪಾದನೆ ವಿರುದ್ಧದ ಕಾರ್ಯಾಚರಣೆಯಲ್ಲಿ 10 ಜನರನ್ನು ಹತ್ಯೆ ಮಾಡಲಾಗಿದ್ದರೆ ಓರ್ವ ಉಗ್ರನನ್ನು ಜೀವಂತವಾಗಿ ಸೆರೆ ಹಿಡಿಯಲಾಗಿದೆ.

ಮೋಹನ್ ನಾಥ್ ಗೋಸ್ವಾಮಿ 2002 ರಲ್ಲಿ  ಅರೆ ಕಮಾಂಡೊ ಪಡೆಗೆ ಸೇರ್ಪಡೆಯಾಗಿದ್ದರು.  ಸೇನೆಯ ವಿಶೇಷ ಕಮಾಂಡೋ ಪಡೆ ಕೈಗೊಂಡಿದ್ದ ಉಗ್ರರ ವಿರುದ್ಧದ ಬಹುತೇಕ ಕಾರ್ಯಾಚರಣೆಗಳಲ್ಲಿ ಮೋಹನ್ ನಾಥ್ ಗೋಸ್ವಾಮಿ ಭಾಗಿಯಾಗಿದ್ದಾರೆ.
ಸೇನಾ ಕಾರ್ಯಾಚಾರಣೆಯಲ್ಲಿ ಮೋಹನ್ ನಾಥ್ ಗೋಸ್ವಾಮಿ ಸಾವನ್ನಪ್ಪುವುದಕ್ಕೂ ಮುನ್ನ ಮೂರು ಉಗ್ರರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮೃತಪಟ್ಟಿದ್ದ ಯೋಧನ ಪಾರ್ಥಿವ ಶರೀರವನ್ನು ಇಂದು ಉತ್ತರ ಪ್ರದೇಶದ ಬರೇಲಿಗೆ ತರಲಾಗಿದ್ದು, ಹುತಾತ್ಮ ಯೋಧನ ಹುಟ್ಟೂರಿನಲ್ಲಿ ನಾಳೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT