ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ 
ದೇಶ

ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯಿಂದ ಧರ್ಮ,ಸಂವಿಧಾನ ಉಳಿಸಿ ಅಭಿಯಾನ

ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಧರ್ಮ ಮತ್ತು ಸಂವಿಧಾನ ಉಳಿಸಿ ಎಂಬ ಅಭಿಯಾನ ಆಯೋಜಿಸುವುದಾಗಿ ಘೋಷಿಸಿದೆ.

ಹೈದರಾಬಾದ್: ಯೋಗ, ಸೂರ್ಯನಮಸ್ಕಾರ, ವಂದೇ ಮಾತರಂ ಮೂಲಕ ದೇಶದ ಮೇಲೆ ನಿರ್ದಿಷ್ಟ ಧರ್ಮದ ಸಂಸ್ಕೃತಿಯನ್ನು ಹೇರಲಾಗುತ್ತಿದೆ ಎಂದು ಆರೋಪಿಸಿರುವ  ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಧರ್ಮ ಮತ್ತು ಸಂವಿಧಾನ ಉಳಿಸಿ ಎಂಬ ಅಭಿಯಾನ ಆಯೋಜಿಸುವುದಾಗಿ ಘೋಷಿಸಿದೆ.

ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಇತರ ಸಂಘಟನೆಗಳಿಗೂ ಆಹ್ವಾನ ನೀಡಲಾಗಿದೆ. ಅಭಿಯಾನ ಹಮ್ಮಿಕೊಂಡಿರುವ ಬಗ್ಗೆ ಮಾತನಾಡಿದ ಮೌಲಾನಾ ಸಜ್ಜದ್ ನವೋಮನಿ, ಅಭಿಯಾನದ ಭಾಗವಾಗಿ ಸಾರ್ವಜನಿಕ ಸಭೆ, ವಿಚಾರಗೋಷ್ಠಿಗಳು ಮತ್ತು ವಿಚಾರ ಸಂಕಿರಣ ನಡೆಯಲಿದೆ ಎಂದು ಹೇಳಿದ್ದಾರೆ.

"ಮುಸ್ಲಿಂ ಸಮುದಾಯದ ನಂಬಿಕೆಗಳಿಗೆ ಅಪಾಯ ಎದುರಾಗಿದೆ. ವಂದೇ ಮಾತರಂ ಸೂರ್ಯನಮಸ್ಕಾರ, ಯೋಗದ ಮೂಲಕ ಜಾತ್ಯಾತೀತ ಭಾರತದ ಮೇಲೆ ನಿರ್ದಿಷ್ಟ ಧರ್ಮವನ್ನು ಹೇರುವ ಯತ್ನ ನಡೆಯುತ್ತಿದೆ. ಮುಸ್ಲಿಂ ಸಮುದಾಯದವರು ಅವರ ನಂಬಿಕೆಗಳ ಬಗ್ಗೆ ರಾಜಿ ಮಾಡಿಕೊಳ್ಳಲು ಸಿದ್ಧರಿಲ್ಲ. ಇತ್ತೀಚಿನ ಬೆಳವಣಿಗೆಗಳಿಂದ ಮುಸ್ಲಿಂ ಸಮುದಾಯ ಆತಂಕಕ್ಕೊಳಗಾಗಿದೆ" ಎಂದು ಮೌಲಾನಾ ಸಜ್ಜದ್ ಹೇಳಿದ್ದಾರೆ.

ಕೆಲವು ಕಾನೂನುಗಳಲ್ಲಿ ಬದಲಾವಣೆ ಮಾಡಲು ಯತ್ನಿಸಲಾಗುತ್ತಿದ್ದು ಇದರಿಂದಾಗಿ ಮುಸ್ಲಿಮರ ವಯಕ್ತಿಕ ಕಾನೂನುಗಳಿಗೆ ಧಕ್ಕೆ ಉಂಟಾಗಲಿದೆ ಎಂದು ಸಜ್ಜದ್ ಆರೋಪಿಸಿದ್ದಾರೆ. ಅಧಿಕಾರದ ಚುಕ್ಕಾಣಿ ಹಿಡಿರುವವರ ಬೆಂಬಲದಿಂದ ಕೋಮುವಾದ ಮತ್ತಷ್ಟು ಬಲಗೊಳ್ಳುತ್ತಿದೆ. ಇದರಿಂದಾಗಿ ಅಭಿವೃದ್ಧಿಗೆ ಅಡ್ಡಿ ಉಂಟಾಗುತ್ತಿದೆ ಎಂದು ಸಜ್ಜದ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT