ಪ್ರತಿಭಟನಾ ನಿರತ ಮಾಜಿ ಸೈನಿಕರು 
ದೇಶ

ಮಾಜಿ ಸೈನಿಕರ ಹೋರಾಟಕ್ಕೆ ಮಣಿದ ಕೇಂದ್ರ, ಇಂದು ಒಆರ್‌ಒಪಿ ಯೋಜನೆ ಜಾರಿ ಸಾಧ್ಯತೆ

ಕಡೆಗೂ ಮಾಜಿ ಸೈನಿಕರ ಹೋರಾಟಕ್ಕೆ ಮಣಿದಿರುವ ನರೇಂದ್ರ ಮೋದಿ ಸರ್ಕಾರ 'ಸಮಾನ ಶ್ರೇಣಿ, ಸಮಾನ ಪಿಂಚಣಿ(ಒಆರ್‌ಒಪಿ)' ಯೋಜನೆಯನ್ನು ಇಂದಿನಿಂದ...

ನವದೆಹಲಿ: ಕಡೆಗೂ ಮಾಜಿ ಸೈನಿಕರ ಹೋರಾಟಕ್ಕೆ ಮಣಿದಿರುವ ನರೇಂದ್ರ ಮೋದಿ ಸರ್ಕಾರ 'ಸಮಾನ ಶ್ರೇಣಿ, ಸಮಾನ ಪಿಂಚಣಿ(ಒಆರ್‌ಒಪಿ)' ಯೋಜನೆಯನ್ನು ಇಂದಿನಿಂದ ಜಾರಿಗೊಳಿಸುವ ಸಾಧ್ಯತೆ ಇದೆ.

ಈ ಸಂಬಂಧ ಇಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಸುದ್ದಿಗೋಷ್ಠಿ ನಡೆಸಿ ಯೋಜನೆಯನ್ನು ಘೋಷಿಸುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ, 2014, ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ಪ್ರತಿ ವರ್ಷ ಪಿಂಚಣಿ ಪರಿಷ್ಕರಣೆಗೆ ಒತ್ತಾಯಿಸಿ ಕಳೆದ ಆಗಸ್ಟ್ 14ರಿಂದ ಮಾಜಿ ಸೈನಿಕರು ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಅವರು ಎರಡು ವರ್ಷಳಿಗೊಮ್ಮೆ ಪಿಂಚಣಿ ಪರಿಷ್ಕರಣೆ ಮಾಡುವಂತೆ ತಮ್ಮ ನಿಲುವು ಸಡಿಲಿಸಿದ್ದಾರೆ. ಆದರೆ ಸರ್ಕಾರ 5 ವರ್ಷಗಳಿಗೊಮ್ಮೆ ಪರಿಷ್ಕರಣೆ ಮಾಡುವ ತನ್ನ ನಿಲುವನ್ನು ಸಡಿಲಿಸಿರಲಿಲ್ಲ. ಬಿಹಾರ ಚುನಾವಣೆ ಸಮೀಪಿಸುತ್ತಿರುವುದರಿಂದ ಅನಿವಾರ್ಯವಾಗಿ ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸುತ್ತಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT