ಇಂದ್ರಾಣಿ ಮುಖರ್ಜಿ ಮತ್ತು ಶೀನಾ ಬೋರಾ(ಸಂಗ್ರಹ ಚಿತ್ರ) 
ದೇಶ

ಶೀನಾ ಕೊಲೆ ಪ್ರಕರಣ: ಇಂದ್ರಾಣಿ ಸೇರಿ ಮೂವರ ಕಸ್ಟಡಿ ನಾಳೆ ಮುಕ್ತಾಯ

ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳ ಪೊಲೀಸ್ ಕಸ್ಟಡಿ ಸೋಮವಾರ(ಸೆಪ್ಟೆಂಬರ್ 7)ಕ್ಕೆ ಮುಗಿಯುತ್ತಿದ್ದು, ಫಿಲ್ಮಿ ಸ್ಟೈಲ್...

ಮುಂಬೈ: ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳ ಪೊಲೀಸ್ ಕಸ್ಟಡಿ ಸೋಮವಾರ(ಸೆಪ್ಟೆಂಬರ್ 7)ಕ್ಕೆ ಮುಗಿಯುತ್ತಿದ್ದು, ಫಿಲ್ಮಿ ಸ್ಟೈಲ್ ನಲ್ಲಿ ಸಾಗುತ್ತಿರುವ ಕೊಲೆಯ ರಹಸ್ಯ ಇದೀಗ ಶೀನಾಳ ಶವವನ್ನು ಎಸೆಯಲು ಮಹಾರಾಷ್ಟ್ರದ ರಾಯ್ ಘಡ ಜಿಲ್ಲೆಯ ಅರಣ್ಯ ಪ್ರದೇಶವನ್ನೇ ಯಾಕೆ ಆಯ್ಕೆ ಮಾಡಿಕೊಂಡರು ಎಂಬ ಬಗ್ಗೆ  ಪೊಲೀಸರ ತನಿಖೆ ಸಾಗುತ್ತಿದೆ.

ಇಂದ್ರಾಣಿ ಮುಖರ್ಜಿ, ಆಕೆಯ ಮಾಜಿ ಪತಿ ಸಂಜೀವ್ ಖನ್ನಾ ಮತ್ತು ಕಾರಿನ ಚಾಲಕ ಶ್ಯಾಮ್ ರೈ ಅವರ ಪೊಲೀಸ್ ಬಂಧನದ ಅವಧಿಯನ್ನು ನಿನ್ನೆಯಷ್ಟೇ ಸೆಪ್ಟೆಂಬರ್ 7ಕ್ಕೆ ವಿಸ್ತರಿಸಲಾಗಿತ್ತು.

ವಿಚಾರಣೆ ಕುರಿತು ನಿನ್ನೆ ಪ್ರತಿಕ್ರಿಯಿಸಿದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವೈಭವ್ ಬಗಾಡೆ, ಕೊಲೆ ಪ್ರಕರಣ ಮೇಲ್ನೋಟಕ್ಕೆ ಸಿನಿಮಾ ಶೈಲಿಯಂತೆ ಕಂಡುಬರುತ್ತಿದ್ದರೂ ಶವವನ್ನು ಬಿಸಾಡಲು ರಾಯ್ ಗಢ ಅರಣ್ಯವನ್ನೇ ಯಾಕೆ ಆಯ್ಕೆ ಮಾಡಿಕೊಂಡಿದ್ದರು ಎಂಬ ಬಗ್ಗೆ ತನಿಖೆ ನಡೆಸಬೇಕಾಗಿದೆ ಎಂದು ಹೇಳಿದ್ದಾರೆ.

ಇಂದ್ರಾಣಿ ಮುಖರ್ಜಿ ತನಿಖೆ ವೇಳೆ ಸರಿಯಾದ ಸಹಕಾರ ನೀಡುತ್ತಿಲ್ಲ. ಮೊಂಡು ಹಠ ಮಾಡುತ್ತಿದ್ದಾರೆ. ಅವರಿಂದ ಇನ್ನಷ್ಟು ಮಾಹಿತಿ ಕಲೆಹಾಕಬೇಕಾಗಿದೆ. ರಾಯ್ ಘಡ ಜಿಲ್ಲೆಯಲ್ಲಿ ಸಿಕ್ಕಿದ ಶವದ ಮೂಳೆಗಳ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಕೂಡ ಸಿಗಬೇಕಾಗಿದೆ ಎಂದು ಹೇಳಿದರು.

ಈ ಮೂವರು ಆರೋಪಿಗಳ ಜೊತೆ ಇನ್ನೂ ಯಾರಾದರು ಕೊಲೆ ಪಿತೂರಿಯಲ್ಲಿ ಭಾಗಿಯಾಗಿರಬಹುದೇ ಎಂದು ಕೂಡ ತನಿಖಾಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Afghanistan-Pakistan War: ಪಾಕ್ ವೈಮಾನಿಕ ದಾಳಿಯಲ್ಲಿ ಮೂವರು ಅಫ್ಘಾನ್ ಕ್ರಿಕೆಟಿಗರು ಬಲಿ; ಭಾರತದಂತೆ ಕಠಿಣ ನಿರ್ಧಾರ ತೆಗೆದುಕೊಂಡ ACB

'75 ಗಂಟೆಯಲ್ಲಿ 303 ನಕ್ಸಲರ ಶರಣಾಗತಿ: ಭಯೋತ್ಪಾದನೆ ಮುಕ್ತ ದೀಪಾವಳಿ; ವಿಶ್ವದ ಮುಂದೆ ಮೊದಲ ಬಾರಿ ನನ್ನ ನೋವು ಹೇಳಿಕೊಳ್ತಿದ್ದೀನಿ'

Pakistan Airstrikes Afghanistan: 10 ಮಂದಿ ಅಫ್ಘಾನ್ ನಾಗರಿಕರು ಸಾವು, ಪ್ರತೀಕಾರದ ಪ್ರತಿಜ್ಞೆ ಮಾಡಿದ ಕಾಬುಲ್

ಮತ್ತೆ ಸರ್ಕಾರ V/s ಗುತ್ತಿಗೆದಾರರ ಸಮರ: ಬಿಲ್​ ಕ್ಲಿಯರ್​ ಮಾಡಲು 1 ತಿಂಗಳ ಗಡುವು..!

ಬೆಂಗಾವಲು ರಕ್ಷಣೆ ವಾಪಸ್: ನನಗೇನಾದರೂ ಆದರೆ, ಸರ್ಕಾರ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಹೊಣೆ; ಛಲವಾದಿ ನಾರಾಯಣಸ್ವಾಮಿ

SCROLL FOR NEXT