ಮುಲಾಯಂ ಸಿಂಗ್ ಯಾದವ್ 
ದೇಶ

ಬಿಜೆಪಿಗೆ ಅಧಿಕಾರ ಸಿಗಲು ಕಾಂಗ್ರೆಸ್ ತಪ್ಪು ನೀತಿಗಳೇ ಕಾರಣ: ಮುಲಾಯಂ ಸಿಂಗ್

ಕೇಂದ್ರದಲ್ಲಿ ಬಿಜೆಪಿಗೆ ಅಧಿಕಾರ ಸಿಗುವುದಕ್ಕೆ ಕಾಂಗ್ರೆಸ್ ಕಾರಣ ಎಂದು ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಆರೋಪಿಸಿದ್ದಾರೆ.

ಮೈನ್ ಪುರಿ: ಕೇಂದ್ರದಲ್ಲಿ ಬಿಜೆಪಿಗೆ ಅಧಿಕಾರ ಸಿಗುವುದಕ್ಕೆ ಕಾಂಗ್ರೆಸ್ ಕಾರಣ ಎಂದು ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಆರೋಪಿಸಿದ್ದಾರೆ.

ಕಾಂಗ್ರೆಸ್ ನ ತಪ್ಪು ನೀತಿಗಳು ಬಿಜೆಪಿಗೆ ಅಧಿಕಾರ ಪಡೆಯಲು ನೆರವಾಯಿತು, ಇದಕ್ಕೆ ಸೆಕ್ಯುಲರ್ ಪಕ್ಷಗಳೂ ಸಹ ಪರೋಕ್ಷವಾಗಿ ಸಹಾಯ ಮಾಡಿವೆ ಎಂದಿದ್ದಾರೆ ಮುಲಾಯಂ ಸಿಂಗ್ ಯಾದವ್. ಉತ್ತರ ಪ್ರದೇಶದಲ್ಲಿ ಸೈನಿಕ ಶಾಲೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮುಲಾಯಂ ಸಿಂಗ್,

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಅದರ ತಪ್ಪು ನೀತಿಗಳೇ ಕಾರಣ, 2017 ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಮಹತ್ವವಾಗಿದ್ದು, ಸಮಾಜವಾದಿ ಪಕ್ಷವೇ ಮತ್ತೆ ಸರ್ಕಾರ ರಚಿಸಬೇಕು ಎಂದು ಜನರಿಗೆ ಕರೆ ನೀಡಿದ್ದಾರೆ. ಬಡವರಿಗಾಗಿ, ಹಿಂದುಳಿದವರಿಗಾಗಿ ಅತಿ ಹೆಚ್ಚು ಕೆಲಸ ಮಾಡಿರುವ ಏಕೈಕ ಸರ್ಕಾರ ಸಮಾಜವಾದಿ ಸರ್ಕಾರ ಎಂದು ಮುಲಾಯಂ ಸಿಂಗ್ ಹೇಳಿದ್ದಾರೆ.

ಪ್ರಧಾನಿ ಮಂತ್ರಿ ಹುದ್ದೆ ಕೈತಪ್ಪಿದ್ದರ ಬಗ್ಗೆ ಪ್ರತಿಕ್ರಿಯಿಸಿರುವ ಮುಲಾಯಂ ಸಿಂಗ್ ಯಾದವ್, ಪ್ರಧಾನಿಯಾಗುವುದು ದೊಡ್ಡ ವಿಷಯವಲ್ಲ, ಹಿಂದುಳಿದ, ಬಡವರ್ಗದ ಏಳಿಗೆಗಾಗಿ ಶ್ರಮಿಸುವುದು ಮುಖ್ಯ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT