ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ 
ದೇಶ

ದಾವುದ್ ಮತ್ತು ಹಫೀಜ್ ನಂತಹ ಶತ್ರುಗಳ ಅಟ್ಟಡಗಿಸಲು ಭಾರತ ಸಿದ್ಧ: ರಾಥೋಡ್

ದಾವೂದ್ ಇಬ್ರಾಹಿಂ ಮತ್ತು ಎಲ್ಇಟಿ ಉಗ್ರ ಸಂಘಟನೆಯ ಅಧ್ಯಕ್ಷ ಹಫೀಜ್ ಸಯ್ಯದ್ ಇಂತರ ದೇಶದ ಶತ್ರುಗಳ ಬಗ್ಗೆ ಭಾರತ ಚಿಂತಿಸುತ್ತಿಲ್ಲ ಎಂದು ತಿಳಿಯುವುದು ಬೇಡ

ನವದೆಹಲಿ: ದಾವೂದ್ ಇಬ್ರಾಹಿಂ ಮತ್ತು ಎಲ್ಇಟಿ ಉಗ್ರ ಸಂಘಟನೆಯ ಅಧ್ಯಕ್ಷ ಹಫೀಜ್ ಸಯ್ಯದ್ ಇಂತರ ದೇಶದ ಶತ್ರುಗಳ ಬಗ್ಗೆ ಭಾರತ ಚಿಂತಿಸುತ್ತಿಲ್ಲ ಎಂದು ತಿಳಿಯುವುದು ಬೇಡ ಎಂದು ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಇಂದು ಹೇಳಿದ್ದಾರೆ.

"ನಮ್ಮ ಶತ್ರುಗಳನ್ನು ಅಟ್ಟಡಗಿಸಲು ನಾವು ಸದಾ ಸಿದ್ಧರಿದ್ದೇವೆ" ಎಂದು ೧೯೯೩ ರ ಮುಂಬೈ ಸರಣಿ ಸ್ಫೋಟದ ರೂವಾರಿ ದಾವುದ್ ಇಬ್ರಾಹಿಮ್ ಮತ್ತು ಸಯ್ಯದ್ ಮೇಲೆ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ.

"ಶತ್ರು ಎಲ್ಲೇ ಇರಲಿ, ಬಾರತ ಅವನ ಬಗ್ಗೆ ಚಿಂತಿಸುತ್ತಿಲ್ಲ ಎಂದು ನಂಬುವದು ಬೇಡ" ಎಂದು ಟಿವಿ ವಾಹಿನಿ ಆಜ್ ತಕ್ ನ 'ಸೀದಿ ಬಾತ್' ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರ ೧೫ ತಿಂಗಳ ಆಡಳಿತ ಮುಗಿಸಿದ್ದರು ಕೂಡ ಪಾಕಿಸ್ತಾನದಲ್ಲಿ ನೆಲೆಸಿರುವ ಈ ಉಗ್ರರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಎಂಬ ದೂರು ಕೇಳಿ ಬಂದಿತ್ತು.

ಇವರ ವಿರುದ್ಧ ರಹಸ್ಯ ಕಾರ್ಯಾಚರಣೆ ನಡೆಸಲಾಗುತ್ತದೆಯೇ ಎಬ ಪ್ರಶ್ನೆಗೆ "ಅದು ಕೂಡ ಆಗಬಹುದು ಆದರೆ ಅದನ್ನು ನಾವು ಮುಂಚಿತವಾಗಿ ಪ್ರಚಾರ ಮಾಡುವುದಿಲ್ಲ. ಕಾರ್ಯಾಚರಣೆ ನಂತರವೂ ಕೂಡ ನಾವು ಪ್ರಚಾರ ಮಾಡಬಹುದು ಅಥವಾ ಮಾಡದೆ ಇರಬಹದು" ಎಂದು ಅವರು ಹೇಳಿದ್ದಾರೆ.

"ವಿಶೇಷ ಕಾರಾಚರಣೆಯ ನಂತರ ಸಾರ್ವಜನಿಕರಿಗೆ ತಿಳಿಸಲಾಗುತ್ತದೆ. ಆದರೆ ಅದರ ಸಮಯವನ್ನು ಸರ್ಕಾರ ಚಿಂತಿಸಬೇಕಾಗುತ್ತದೆ.... ಯಾರಿಗೆ ಗೊತ್ತು ಈ ಕಾರ್ಯಾಚರಣೆ ಈಗ ಜಾರಿಯಲ್ಲಿರಬಹುದು, ಇಲ್ಲದೆಯೂ ಇರಬಹುದು. ಇದು ಮುಗಿದ ನಂತರವಷ್ಟೇ ಹೇಳಲು ಸಾಧ್ಯ" ಎಂದು ರಾಥೋಡ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT