ನವದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಸೋನಿಯಾ ಗಾಂಧಿ ಮತ್ತು ಇತರ ನಾಯಕರು. 
ದೇಶ

ಮೋದಿ ಸರ್ಕಾರ ವಾಸ್ತವಕ್ಕೆ ದೂರವಾಗಿದೆ: ಸೋನಿಯಾ ಗಾಂಧಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರದ ವಿರುದ್ಧ...

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಕೇಂದ್ರ ಸರ್ಕಾರ ಭೂ ವಿಧೇಯಕ ಮಸೂದೆಯನ್ನು ಹಿಂತೆಗೆದುಕೊಂಡಿರುವುದಕ್ಕೆ ಪ್ರತಿಕ್ರಿಯಿಸಿದ ಸೋನಿಯಾ ಗಾಂಧಿ, ಭೂ ವಿಧೇಯಕವನ್ನು ಹಿಂತೆಗೆದುಕೊಂಡಿರುವ ಸರ್ಕಾರದ ನಿರ್ಧಾರದಿಂದ ಅದು ವಾಸ್ತವ ಸ್ಥಿತಿಯಿಂದ ದೂರವಿದೆ ಎಂಬುದು ತಿಳಿಯುತ್ತದೆ. ಮೋದಿ ನೇತೃತ್ವದ ಸರ್ಕಾರ ಮಾತು ಮತ್ತು ಕೆಲಸದಲ್ಲಿ ಹಾಗೂ ಮಾಧ್ಯಮಗಳಲ್ಲಿ ವೈಭವೀಕರಣ ಮಾಡುವುದನ್ನು ಮತ್ತು ವಾಸ್ತವ ಸಾಧನೆಗಳನ್ನು ಹೊಂದಾಣಿಕೆ ಮಾಡುವುದರಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ದೇಶದ ಆರ್ಥಿಕ ಸ್ಥಿತಿ ಇಳಿಮುಖವಾಗುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಮೇಕ್ ಇನ್ ಇಂಡಿಯಾ, ಸ್ವಚ್ಛ ಭಾರತ ಇತ್ಯಾದಿ ವಿಷಯಗಳ ಕುರಿತು ಮಾಧ್ಯಮಗಳಲ್ಲಿ ವೈಭವೀಕರಿಸಲಾಗುತ್ತಿಲ್ಲ. ಆದರೆ ವಾಸ್ತವವಾಗಿ ಅಷ್ಟೊಂದು ಕೆಲಸಗಳು ನಡೆಯುತ್ತಿಲ್ಲ. ಮಾಧ್ಯಮಗಳಿಗೆ ಬೆದರಿಕೆ ಹಾಕುವ ದುರಾಡಳಿತ ಕ್ರಮಗಳನ್ನು ಕೂಡ ಸರ್ಕಾರ ಮಾಡುತ್ತಿದೆ ಎಂದರು.ಪಾಕಿಸ್ತಾನ ಮೇಲೆ ಸುಸಂಬದ್ಧ ನೀತಿಯನ್ನು ಅನುಸರಿಸುವ ಬದಲು ಸರ್ಕಾರ ಬೇರೆಲ್ಲಾ ಮಾಡಲು ಯತ್ನಿಸುತ್ತಿದೆ. ಇದರಿಂದ ಸಂಬಂಧ ಸುಧಾರಣೆಯಾಗುವುದಿಲ್ಲ ಎಂದರು.

ಕಳೆದ ವಾರ ಮೂರು ದಿನಗಳ ಕಾಲ ನಡೆದ ಬಿಜೆಪಿ-ಆರ್ ಎಸ್ ಎಸ್ ಸಭೆಯ ಬಗ್ಗೆ ಅಸಮಾಧಾನ ಹೊರಹಾಕಿದ ಸೋನಿಯಾ ಗಾಂಧಿ, ಸುದೀರ್ಘ ವರ್ಷಗಳಿಂದ ಭಾರತದಲ್ಲಿ ಏನು ತರಲು ಹೊರಟಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಮೋದಿ ಸರ್ಕಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿಡಿತದಲ್ಲಿದ್ದು, ಅದರ ಆದೇಶದಂತೆ ನಡೆದುಕೊಳ್ಳುತ್ತಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಮುಂದುವರಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT