ವರ್ಗಾವಣೆಯಾದ ಮುಂಬೈ ಪೊಲೀಸ್‌ ಆಯುಕ್ತ ರಾಕೇಶ್ ಮಾರಿಯಾ (ಸಂಗ್ರಹ ಚಿತ್ರ) 
ದೇಶ

ಮುಂಬೈ ಪೊಲೀಸ್‌ ಆಯುಕ್ತ ರಾಕೇಶ್ ಮಾರಿಯಾ ದಿಢೀರ್ ವರ್ಗಾವಣೆ

ಇಡೀ ದೇಶದ ಗಮನ ಸೆಳೆದಿದ್ದ ಶೀನಾ ಬೋರಾ ಹತ್ಯಾ ಪ್ರಕರಣದ ತನಿಖೆಯ ಜವಾಬ್ದಾರಿ ಹೊತ್ತಿದ್ದ ಮುಂಬೈ ಪೊಲೀಸ್‌ ಆಯುಕ್ತ ರಾಕೇಶ್ ಮಾರಿಯಾ ಅವರನ್ನು ಮಂಗಳವಾರ ದಿಢೀರ್ ವರ್ಗಾವಣೆ ಮಾಡಲಾಗಿದೆ...

ಮುಂಬೈ: ಇಡೀ ದೇಶದ ಗಮನ ಸೆಳೆದಿದ್ದ ಶೀನಾ ಬೋರಾ ಹತ್ಯಾ ಪ್ರಕರಣದ ತನಿಖೆಯ ಜವಾಬ್ದಾರಿ ಹೊತ್ತಿದ್ದ ಮುಂಬೈ ಪೊಲೀಸ್‌ ಆಯುಕ್ತ ರಾಕೇಶ್ ಮಾರಿಯಾ ಅವರನ್ನು  ಮಂಗಳವಾರ ದಿಢೀರ್ ವರ್ಗಾವಣೆ ಮಾಡಲಾಗಿದೆ.

ಮೂಲಗಳ ಪ್ರಕಾರ ಮುಂಬೈ ಪೊಲೀಸ್‌ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ರಾಕೇಶ್ ಮಾರಿಯಾ ಅವರನ್ನು ಮಹಾರಾಷ್ಟ್ರ ಸರ್ಕಾರ ವರ್ಗಾವಣೆ ಮಾಡಿದ್ದು, ಅವರನ್ನು ಗೃಹ ರಕ್ಷಕದಳದ  ಡಿಜಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ. ಮಾಧ್ಯಮ ಕ್ಷೇತ್ರದ ದೈತ್ಯ ಉದ್ಯಮಿ ಎಂದೇ ಖ್ಯಾತರಾಗಿದ್ದ 9ಎಕ್ಸ್ ಸಮೂಹ ಸಂಸ್ಥೆಯ ಮಾಲಕಿ ಇಂದ್ರಾಣಿ ಮುಖರ್ಜಿ ಮತ್ತು  ಆಕೆಯ ಮಾಜಿ ಪತಿ ಸಜೀವ್ ಖನ್ನಾ ಹಾಗೂ ಕಾರು ಚಾಲಕ ಶ್ಯಾಮ್ ರೈ ಎಂಬಾತನನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸುತ್ತಿದ್ದು, ದಿನಕ್ಕೊಂದು ಸ್ಫೋಟಕ ಮಾಹಿತಿಗಳು  ಹೊರಬೀಳುತ್ತಿವೆ.

ಈ ಹಂತದಲ್ಲಿ ರಾಕೇಶ್ ಮಾರಿಯಾ ಅವರ ದಿಢೀರ್ ವರ್ಗಾವಣೆ ಪ್ರಕರಣದ ತನಿಖೆಯ ಮೇಲೆ ಪರಿಣಾಮ ಬೀರಲಿದೆ ಎಂಬ ಶಂಕೆಯೂ ವ್ಯಕ್ತವಾಗುತ್ತಿದೆ. ಇನ್ನು ಸರ್ಕಾರದ ಕ್ರಮದ ಕುರಿತು  ಹಲವು ಶಂಕೆಗಳು ವ್ಯಕ್ತವಾಗುತ್ತಿದ್ದು, ಇಡೀ ದೇಶದ ಗಮನ ಸೆಳೆದಿದ್ದ ಹೈ ಪ್ರೊಫೈಲ್ ಹತ್ಯಾ ಪ್ರಕರಣದ ತನಿಖೆ ನಿರ್ಣಾಯಕ ಹಂತದಲ್ಲಿರುವಾಗ ತನಿಖೆಯ ಜವಾಬ್ದಾರಿ ಹೊತ್ತಿದ್ದ ಹಿರಿಯ  ಪೊಲೀಸ್ ಅಧಿಕಾರಿಯನ್ನು ವರ್ಗ ಮಾಡುವ ಜರೂರತ್ತು ಏನಿತ್ತು ಎನ್ನುವ ಕುರಿತು ಹಲವು ಅನುಮಾನಗಳು ಮೂಡುತ್ತಿವೆ. ಇನ್ನು ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ ಈ ವರೆಗೂ ಮಹಾರಾಷ್ಟ್ರ  ಸರ್ಕಾರವಾಗಲಿ ಅಥವಾ ಮುಂಬೈ ಪೊಲೀಸ್ ಇಲಾಖೆಯಾಗಲಿ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ