ಶೀನಾ ಬೋರಾ - ಇಂದ್ರಾಣಿ ಮುಖರ್ಜಿ 
ದೇಶ

ಮರಿಯಾ ವರ್ಗಾವಣೆ ಶೀನಾ ಹತ್ಯೆ ಪ್ರಕರಣದ ತನಿಖೆ ಮೇಲೆ ಪರಿಣಾಮ: ಕಾಂಗ್ರೆಸ್

ಶೀನಾ ಬೋರಾ ಹತ್ಯೆ ಪ್ರಕರಣದ ತನಿಖೆ ಒಂದು ತಾರ್ಕಿಕ ಅಂತ್ಯಕ್ಕೆ ಬರುವವರೆಗೆ ಮಾಜಿ ಮುಂಬೈ ಪೊಲೀಸ್ ಆಯುಕ್ತ ರಾಕೇಶ್ ಮರಿಯಾ ಅವರ ವರ್ಗಾವಣೆ...

ನವದೆಹಲಿ: ಶೀನಾ ಬೋರಾ ಹತ್ಯೆ ಪ್ರಕರಣದ ತನಿಖೆ ಒಂದು ತಾರ್ಕಿಕ ಅಂತ್ಯಕ್ಕೆ ಬರುವವರೆಗೆ ಮಾಜಿ ಮುಂಬೈ ಪೊಲೀಸ್ ಆಯುಕ್ತ ರಾಕೇಶ್ ಮರಿಯಾ ಅವರ ವರ್ಗಾವಣೆ ಆದೇಶವನ್ನು ದೇವೇಂದ್ರ ಫಡ್ನವಿಸ್ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಹಿಂಪಡೆಯಬೇಕು ಎಂದು ಕಾಂಗ್ರೆಸ್ ನಾಯಕ ಸಂಜಯ್ ನಿರುಪಂ ಅವರು ಆಗ್ರಹಿಸಿದ್ದಾರೆ.

ಮರಿಯಾ ವರ್ಗಾವಣೆ ಶೀನಾ ಬೋರಾ ಹತ್ಯೆ ಪ್ರಕರಣದ ತನಿಖೆಯ ಮೇಲೆ ಪರಿಣಾಮ ಬೀರಲಿದೆ ಎಂದಿರುವ ನಿರುಪಂ, ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದ ತನಿಖೆಯನ್ನು ತಡೆಯಲು ಕಾರ್ಪೊರೇಟ್ ವಲಯ ಸರ್ಕಾರದ ಮೇಲೆ ರಾಜಕೀಯ ಒತ್ತಡ ಹೇರಿರುವುದು ಇದರಿಂದ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಸುಮಾರು 800 ಕೋಟಿ ರುಪಾಯಿ ಅವ್ಯವಹಾರದಲ್ಲಿ ಹಲವು ಕಾರ್ಪೊರೇಟ್ ಕಂಪನಿಗಳು ಭಾಗಿಯಾಗಿವೆ ಎಂದು ನಿರುಪಂ ಅವರು ಎಎನ್‌ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ರಾಕೇಶ್ ಮರಿಯಾ ಅವರು ಈಗಾಗಲೇ ಸೆಪ್ಟೆಂಬರ್ 30ರೊಳಗೆ ಚಾರ್ಜ್‌ಶೀಟ್ ಸಲ್ಲಿಸುವುದಾಗಿ ಹೇಳಿದ್ದಾರೆ. ಪ್ರಕರಣ ತಾರ್ಕಿಕ ಅಂತ್ಯ ಕಾಣಬೇಕಾದರೆ ಮಹಾರಾಷ್ಟ್ರ ಸರ್ಕಾರ ಮರಿಯಾ ವರ್ಗಾವಣೆ ಆದೇಶವನ್ನು ಹಿಂಪಡೆಯಬೇಕು ಎಂದಿದ್ದಾರೆ.

ಮರಿಯಾ ಅವರನ್ನು ಮಹಾರಾಷ್ಟ್ರ ಸರ್ಕಾರ ನಿನ್ನೆ ಗೃಹ ರಕ್ಷಕ ದಳದ ಡಿಜಿಯಾಗಿ ವರ್ಗಾವಣೆ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran war: ಶಾಂತಿ ಕರಡು ಪ್ರತಿಗೆ ತಿದ್ದುಪಡಿ: ಪರಮಾಣು ಮುಕ್ತ ಇರಾನ್‌ಗೆ ಟ್ರಂಪ್ ಪಟ್ಟು, ಕೊನೆ ಕ್ಷಣದಲ್ಲಿ ಬಿಗ್ ಶಾಕ್ ಕೊಟ್ಟ ಅಮೆರಿಕಾ..!

ರೂ.1,413 ಕೋಟಿ ಆಸ್ತಿ, ರೂ.900 ಕೋಟಿಯ ಮಾಲ್.. ಆದ್ರೆ ನಮ್ಮ ಮುಂದಿನ ಸಿಎಂ ಡಿಕೆಶಿ ಹೆಸರಲ್ಲಿರೋದು ಒಂದೇ ಒಂದು ಹಳೇ ಕ್ವಾಲಿಸ್ ಕಾರ್..!

ಸಮಗ್ರತೆ, ಸಮರ್ಪಣೆ ಉದ್ದೇಶದೊಂದಿಗೆ ಕರ್ನಾಟಕ ಜನತೆಗೆ ಸೇವೆ ಸಲ್ಲಿಸಲು ಬದ್ಧ: ಡಿಕೆ ಶಿವಕುಮಾರ್

ದೆಹಲಿಯ ಮೆಹ್ರೌಲಿಯಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ!

ಸಿದ್ದರಾಮಯ್ಯಗೆ ವಿಶ್ರಾಂತಿ ನೀಡಲ್ಲ, ಅವರ ಸೇವೆ ಇನ್ನೂ ಅಗತ್ಯವಿದೆ: CLP ಸಭೆಯಲ್ಲಿ ವೇಣುಗೋಪಾಲ್ ಭಾವುಕ

SCROLL FOR NEXT