ನೇಪಾಳ ಮೂಲದ ಯುವತಿಯರನ್ನು ಬಂಧಿಸಿಟ್ಟಿದ್ದ ಗುರುಂಗಾವ್ ನಲ್ಲಿನ ಫ್ಲ್ಯಾಟ್ 
ದೇಶ

ನೇಪಾಳ ಯುವತಿಯರ ಮೇಲೆ ಅತ್ಯಾಚಾರ: ಸೌದಿ ರಾಯಭಾರಿ ವಿರುದ್ಧ ಪ್ರಕರಣ ದಾಖಲು

ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಸೌದಿ ಅರೇಬಿಯಾದ ವ್ಯಕ್ತಿಯೊಬ್ಬ ಗುರ್ ಗಾಂವ್ ನಲ್ಲಿನ ತಮ್ಮ ದುಬಾರಿ ಫ್ಲ್ಯಾಟ್ ನಲ್ಲಿ ಕೂಡಿ ಹಾಕಿ...

ಗುರ್ ಗಾಂವ್ : ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಸೌದಿ ಅರೇಬಿಯಾದ ವ್ಯಕ್ತಿಯೊಬ್ಬ ಗುರ್ ಗಾಂವ್ ನಲ್ಲಿನ ತಮ್ಮ ದುಬಾರಿ ಫ್ಲ್ಯಾಟ್ ನಲ್ಲಿ ಕೂಡಿ ಹಾಕಿ ಹಿಂಸೆ ನೀಡಿ ಪದೇ ಪದೇ ಅತ್ಯಾಚಾರವೆಸಗಿದರು ಎಂದು ಇಬ್ಬರು ನೇಪಾಳ ಮೂಲದ ಇಬ್ಬರು ಮಹಿಳೆಯರು ಆರೋಪಿಸಿದ್ದಾರೆ.

ಈ ಇಬ್ಬರು ಮಹಿಳೆಯರು ಕಳೆದ ನಾಲ್ಕು ತಿಂಗಳಿನಿಂದ ಆ ವ್ಯಕ್ತಿಯ ಮನೆಯಲ್ಲಿ ಕೆಲಸಕ್ಕಿದ್ದರು. ನೇಪಾಳ ಮೂಲದ ಸರ್ಕಾರೇತರ ಸಂಘಟನೆ ನೀಡಿದ ಮಾಹಿತಿ ಆಧಾರದ ಮೇಲೆ ಇವರನ್ನು ಮೊನ್ನೆ ಸೋಮವಾರ ರಾತ್ರಿ ಪೊಲೀಸರು ರಕ್ಷಿಸಿದ್ದಾರೆ.

ರಾಯಭಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಮತ್ತು ಆತನ ಸಹಚರರ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಆದರೆ ರಾಜತಾಂತ್ರಿಕ ವಿನಾಯಿತಿ ಪಡೆಯುವ ಸಾಧ್ಯತೆಯಿರುವುದರಿಂದ ಆರೋಪಿಯನ್ನು ಸೌದಿ ಅರೇಬಿಯಾ ಪ್ರಜೆ ಎಂದು  ದಾಖಲಿಸಿಕೊಳ್ಳಲಿಲ್ಲ.ಪೊಲೀಸರು ಆರೋಪಪಟ್ಟಿ ದಾಖಲಿಸಿದ ನಂತರವೇ ಸರ್ಕಾರ ಸೌದಿ ಅರೇಬಿಯಾ ಸರ್ಕಾರದ ಬಳಿ ವಿಚಾರಣೆಗೆ ಬಿಟ್ಟುಕೊಡುವಂತೆ ಕೇಳಬಹುದು.ಇಲ್ಲದಿದ್ದರೆ ಆತನ ವಿರುದ್ಧ ವಿಚಾರಣೆ ನಡೆಸಲು ಭಾರತಕ್ಕೆ ಅಧಿಕಾರವಿಲ್ಲ.

ಸೌದಿ ಅರೇಬಿಯಾದ ರಾಯಭಾರ ಕಚೇರಿ ನೇಪಾಳ ಮೂಲದ ಈ ಇಬ್ಬರು ಮಹಿಳೆಯರ ಆರೋಪವನ್ನು ತಳ್ಳಿಹಾಕಿದೆ. ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಹೇಳಿದ್ದಾರೆ.
ಆದರೆ ಮಹಿಳೆಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಅವರ ವಿರುದ್ಧ ಲೈಂಗಿಕ ಹಲ್ಲೆಯಾಗಿರುವುದು ದೃಢಪಟ್ಟಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಗುರುಂಗಾವ್ ಅಪರಾಧ ವಿಭಾಗದ ಉಪ ಲೋಕಾಯುಕ್ತ ರಾಜೇಶ್ ಕುಮಾರ್ ತಿಳಿಸಿದ್ದಾರೆ.

ಆರೋಪಿಗಳು ರಾಯಭಾರ ಕಚೇರಿಯ ವಿನಾಯಿತಿ ಪಡೆಯುತ್ತಾರೆಯೇ ಎಂಬ ಕುರಿತು ಗೃಹ ಇಲಾಖೆಗೆ ಮತ್ತು ಸೌದಿ ಅರೇಬಿಯಾ ರಾಯಭಾರ ಕಚೇರಿಗೆ ಪತ್ರ ಬರೆಯಲಾಗಿದೆ. ವಿನಾಯಿತಿ ಪಡೆಯುತ್ತಿದ್ದರೆ ವಿದೇಶಾಂಗ ಸಚಿವಾಲಯದ ಆದೇಶದ ಪ್ರಕಾರ ವಿಚಾರಣೆ ನಡೆಸಲಾಗುವುದು ಎಂದು ಗುರುಗಾಂವ್ ನಗರ ಪೊಲೀಸ್ ಆಯುಕ್ತ ನವದೀಪ್ ಸಿಂಗ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT