ಕಾಶ್ಮೀರಿ ಪ್ರತ್ಯೇಕತಾವಾದಿ ಸಯೀದ್ ಅಲಿ ಗಿಲಾನಿ 
ದೇಶ

ಗಿಲಾನಿ ನೇತೃತ್ವದ ಹುರಿಯತ್ ಕಾನ್ಫರೆನ್ಸ್ ಗೆ ಸೇರಿದ ಮೂವರು ಕಾಶ್ಮೀರಿ ಪ್ರತ್ಯೇಕತಾವಾದಿಗಳು

ಮೂವರು ಹಿರಿಯ ಕಾಶ್ಮೀರಿ ಪ್ರತ್ಯೇಕತಾವಾದಿಗಳು ಸಯೀದ್ ಅಲಿ ಗಿಲಾನಿ ನೇತೃತ್ವದ ಹುರಿಯತ್ ಕಾನ್ಫರೆನ್ಸ್ ಗೆ ಸೇರ್ಪಡೆಯಾಗಿದ್ದಾರೆ.

ಶ್ರೀನಗರ: ಮೂವರು ಹಿರಿಯ ಕಾಶ್ಮೀರಿ ಪ್ರತ್ಯೇಕತಾವಾದಿಗಳು ಸಯೀದ್ ಅಲಿ ಗಿಲಾನಿ ನೇತೃತ್ವದ ಹುರಿಯತ್ ಕಾನ್ಫರೆನ್ಸ್ ಗೆ ಸೇರ್ಪಡೆಯಾಗಿದ್ದಾರೆ.

ಡೆಮಾಕ್ರೆಟಿಕ್ ಫ್ರೀಡಂ ಪಕ್ಷದ ಅಧ್ಯಕ್ಷ ಶಬೀರ್ ಶಾ ಹಾಗೂ ನ್ಯಾಷನಲ್ ಫ್ರಂಟ್ ಅಧ್ಯಕ್ಷ ಹಾಗೂ  ಶಿಯಾ ಸಮುದಾಯದ ಧರ್ಮಗುರು ಅಗಾ ಸೈಯದ್ ಹಸನ್ ಹುರಿಯತ್ ಗೆ ಸೇರಿದ್ದಾರೆ. ಕಾಶ್ಮೀರಿ ಪ್ರತ್ಯೇಕತಾವಾದಿಗಳ ಚಳುವಳಿಗೆ ಅಡ್ಡಿ ಉಂಟಾಗುತ್ತಿದ್ದು, ಅದನ್ನು ಒಗ್ಗಟ್ಟಿನಿಂದ ಎದುರಿಸಬೇಕು ಎಂದು ಹುರಿಯತ್ ಮುಖಂದ ಸಯೀದ್ ಅಲಿ ಗಿಲಾನಿ ಹೇಳಿದ್ದಾರೆ.

ಕಾಶ್ಮೀರವನ್ನು ಭಾರತದಿಂದ ಪ್ರತ್ಯೇಕಿಸುವ ಬೇಡಿಕೆ ಇರಿಸಿ ಹೋರಾಡುತ್ತಿರುವ ಕಾಶ್ಮೀರಿ ಪ್ರತ್ಯೇಕತಾವಾದಿಗಳ ಹೋರಾಟದಲ್ಲಿ ಪ್ರತ್ಯೇಕತಾವಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗಿಲಾನಿ ಅವರೊಂದಿಗೆ ಕೈ ಜೋಡಿಸಲು ಬಯಸುತ್ತಿದ್ದಾರೆ. ಪ್ರತ್ಯೇಕತಾವಾದಿಗಳು ಕಾಶ್ಮೀರ ವಿಷಯದಲ್ಲಿ ಒಂದೇ ರೀತಿಯ ನಿಲುವು ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.

ಹುರಿಯತ್ ಸಂವಿಧಾನದ ಪ್ರಕಾರವೇ ಕಾಶ್ಮೀರ ವಿವಾದವನ್ನು ಅಂತ್ಯಗೊಳಿಸಬೇಕು ಎಂದು ಶಬೀರ್ ಶಾ ಒತ್ತಾಯಿಸಿದ್ದಾರೆ. ಹಿಂದಿನ ಸರ್ಕಾರಗಳಂತೆಯೇ ಈ ಸರ್ಕಾರವೂ ಸಹ ಕಾಶ್ಮೀರಿ ನಾಯಕರ ರಾಜಕೀಯ ಸ್ಥಾನವನ್ನು ದುರ್ಬಲಗೊಳಿಸಿದೆ, ಈ ನಿಲುವು ಹೀಗೇ ಮುಂದುವರೆದಲ್ಲಿ ಭಾರತ ಸರ್ಕಾರ ಇದರ ಪ್ರತಿಕೂಲ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಸಯೀದ್ ಅಲಿ ಗಿಲಾನಿ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT