ತುಟ್ಟಿ ಭತ್ಯೆ ಹೆಚ್ಚಳ (ಸಾಂದರ್ಭಿಕ ಚಿತ್ರ) 
ದೇಶ

ಕೇಂದ್ರ ನೌಕರರ ತುಟ್ಟಿಭತ್ಯೆ ಹೆಚ್ಚಳ

ಗೌರಿ ಗಣೇಶ ಹಬ್ಬಕ್ಕೆ ಕೇಂದ್ರ ಸರ್ಕಾರಿ ನೌಕರರಿಗೆ ಭರಪೂರ ಉಡುಗೊರೆ ಸಿಕ್ಕಿದೆ. ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರ ತುಟ್ಟಿಭತ್ಯೆಯನ್ನು ಶೇ.6ರಷ್ಟು ಹೆಚ್ಚಳ ಮಾಡಿದೆ...

ನವದೆಹಲಿ: ಗೌರಿ ಗಣೇಶ ಹಬ್ಬಕ್ಕೆ ಕೇಂದ್ರ ಸರ್ಕಾರಿ ನೌಕರರಿಗೆ ಭರಪೂರ ಉಡುಗೊರೆ ಸಿಕ್ಕಿದೆ. ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರ ತುಟ್ಟಿಭತ್ಯೆಯನ್ನು ಶೇ.6ರಷ್ಟು ಹೆಚ್ಚಳ ಮಾಡಿದೆ.

ಬುಧವಾರ ನಡೆದ  ಕೇಂದ್ರ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಶೇ.6ರಷ್ಟುಹೆಚ್ಚಳದೊಂದಿಗೆಕೇಂದ್ರ ನೌಕರರ ತುಟ್ಟಿಭತ್ಯೆ ಮೂಲ ವೇತನದ ಶೇ.119ಕ್ಕೆ ಏರಿದೆ.  ಕಳೆದ ಏಪ್ರಿಲ್ ತಿಂಗಳಲ್ಲಷ್ಟೆ ಶೇ.6ರಷ್ಟು ತುಟ್ಟಿಭತ್ಯೆ ಹೆಚ್ಚಿಸಲಾಗಿತ್ತು. ಕೇಂದ್ರದ ಈ ನಿರ್ಧಾರದಿಂದಾಗಿ 45 ಲಕ್ಷ ನೌಕರರು, 50 ಲಕ್ಷ ಪಿಂಚಣಿದಾರರಿಗೆಲಾಭವಾಗಲಿದೆ. ಅತ್ತ ಚುನಾವಣಾ ಆಯೋಗ ಬಿಹಾರ ಚುನಾವಣೆ ವೇಳಾಪಟ್ಟಿ ಪ್ರಕಟಿಸುವ ಮುನ್ನ ಕೇಂದ್ರ ಸರ್ಕಾರ ತುಟ್ಟಿಭತ್ಯೆ ಹೆಚ್ಚಳ ಪ್ರಕಟಿಸಿತು.

ಸ್ಪೆಕ್ಟ್ರಂ ನಿಯಮಕ್ಕೆ ಒಪ್ಪಿಗೆ: ದೂರಸಂಪರ್ಕ ಸೇವಾ ಕಂಪನಿಗಳು ತಮ್ಮ ಬಳಿ ಇರುವ ಹೆಚ್ಚುವರಿ ಸ್ಪೆಕ್ಟ್ರಂ ಮಾರಾಟ ಮಾಡುವುದಕ್ಕೆ ಅನುಕೂಲವಾಗುವಂತೆ ಕೇಂದ್ರ ಸಚಿವ ಸಂಪುಟ  ಅನುಮೋದನೆ ನೀಡಿದೆ. ನೂತನ ನಿಯಮದ ಪ್ರಕಾರ, ಯಾವುದೇ ದೂರಸಂಪರ್ಕ ಕಂಪನಿ ತನ್ನಲ್ಲಿರುವ ತರಂಗಾಂತರಗಳನ್ನು ಬೇರೆ ಕಂಪನಿಗೆ ಮಾರಾಟ ಮಾಡಬಹುದಾಗಿದೆ. ಈ ನಿರ್ಧಾರದಿಂದಾಗಿ ಕಂಪನಿಗಳು ತಾವು ಬಳಸದೇ ಇರುವ ತರಂಗಾಂತರಗಳನ್ನು ಬೇರೆ ಕಂಪನಿಗೆ ಮಾರಾಟ ಮಾಡಬಹುದು ಮತ್ತು ತಮಗೆ ಬೇಕಾದ ತರಂಗಾಂತರಗಳನ್ನು ಖರೀದಿಸಬಹುದಾಗಿದೆ. ಈ ವಹಿವಾಟಿಗೆ ಸರ್ಕಾರದ ಯಾವುದೇ ಪೂರ್ವಾನುಮತಿ ಬೇಕಿಲ್ಲ. ಆದರೆ, ವಹಿವಾಟು ನಿಯಮಾನುಸಾರ ಇರಬೇಕು ಮತ್ತು 45 ದಿನಗಳ ಮುಂಚಿತವಾಗಿ ಸರ್ಕಾರದ ಗಮನಕ್ಕೆ  ತರಬೇಕು ಎಂದು ದೂರಸಂಪರ್ಕ ಸಚಿವ ರವಿಶಂಕರ ಪ್ರಸಾದ್ ತಿಳಿಸಿದ್ದಾರೆ.

ಖರೀದಿಸುವರು ಶೇ.1ರಷ್ಟು ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕಾದ್ದರಿಂದ ತರಂಗಾಂತರ ವಹಿವಾಟಿನಿಂದ ಹೆಚ್ಚುವರಿ ಆದಾಯ ಬರಲಿದೆ. ತರಂಗಾಂತರ ಇದ್ದರೂ ಗ್ರಾಹಕರ ಸಂಖ್ಯೆ ಕಡಿಮೆ ಇರುವ ಕಂಪನಿಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದು ರವಿಶಂಕರ್ ಪ್ರಸಾದ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Demographic manipulation: ಒಳನುಸುಳುವಿಕೆಗಿಂತ ಸಾಮಾಜಿಕ ಸಾಮರಸ್ಯಕ್ಕೆ ಇದೇ 'ದೊಡ್ಡ ಅಪಾಯ'- ಪ್ರಧಾನಿ ಮೋದಿ

RSS Centenary: ಇದೇ ಮೊದಲು; 'ಭಾರತ ಮಾತೆ'ಯ ಚಿತ್ರವುಳ್ಳ 100 ನಾಣ್ಯ ರೂ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಮೈಸೂರು: ಮುಂದಿನ ವರ್ಷಗಳಲ್ಲೂ ದಸರಾದಲ್ಲಿ ನಾನೇ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

DA hike: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್' ; ಶೇ. 3 ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಂಪುಟ ಅನುಮೋದನೆ

ತಮಿಳುನಾಡು: ಅರುಣಾಚಲೇಶ್ವರ ದೇವಸ್ಥಾನಕ್ಕೆ ಬಂದಿದ್ದ ಆಂಧ್ರ ಮಹಿಳೆ ಮೇಲೆ ಅತ್ಯಾಚಾರ; ಇಬ್ಬರು ಪೊಲೀಸರ ಬಂಧನ!

SCROLL FOR NEXT