ರಮಣ್ ಸಿಂಗ್ 
ದೇಶ

ಕೇಂದ್ರ ಆರೋಗ್ಯ ಸಚಿವ, ಛತ್ತೀಸ್‌ಗಢ ಸಿಎಂಗೆ ಕೊಟ್ಟ ನೀರಿನ ಬಾಟ್ಲಿಯಲ್ಲಿ ಹಾವಿನ ಮರಿ ಪತ್ತೆ!

ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಹಾಗೂ ಛತ್ತೀಸ್‌ಗಢ ಮುಖ್ಯಮಂತ್ರಿ ರಮಣ್ ಸಿಂಗ್ ಅವರಿಗೆ ನೀಡಿದ ಕುಡಿಯ ನೀರಿನ ಬಾಟಲಿಯಲ್ಲಿ ಹಾವಿನ ಮರಿ...

ರಾಯ್‌ಪುರ: ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಹಾಗೂ ಛತ್ತೀಸ್‌ಗಢ ಮುಖ್ಯಮಂತ್ರಿ ರಮಣ್ ಸಿಂಗ್ ಅವರಿಗೆ ನೀಡಿದ ಕುಡಿಯ ನೀರಿನ ಬಾಟಲಿಯಲ್ಲಿ ಹಾವಿನ ಮರಿ ಪತ್ತೆಯಾಗಿರುವ ಅತ್ಯಂತ ಅಘಾತಕಾರಿ ಘಟನೆ ಬುಧವಾರ ಬಿಜೆಪಿ ಪ್ರಧಾನ ಕಚೇರಿಯಲ್ಲೇ ನಡೆದಿದೆ.

ವರದಿಗಳ ಪ್ರಕಾರ, ಈ ಪ್ಯಾಕೇಜಡ್ ನೀರಿನ ಬಾಟಲಿಗಳು 'ಅಮನ್ ಅಖ್ವಾ' ಕಂಪನಿಗೆ ಸೇರಿದ್ದು ಎನ್ನಲಾಗಿದೆ.

ರಮಣ್ ಸಿಂಗ್ ಅವರ ವೈದ್ಯಕೀಯ ತಂಡದಲ್ಲಿದ್ದ ಮಹಿಳಾ ವೈದ್ಯೆಯೊಬ್ಬರು ಕುಡಿಯುವ ನೀರಿನ ಬಾಟಲಿಯಲ್ಲಿ ಹಾವಿನ ಮರಿ ಇರುವುದನ್ನು ಪತ್ತೆ ಹಚ್ಚಿದ್ದಾರೆ.

ಸಾಮಾನ್ಯವಾಗಿ ಗಣ್ಯ ವ್ಯಕ್ತಿಗಳಿಗೆ ಯಾವುದೇ ಆಹಾರ ಪದಾರ್ಥಗಳನ್ನು ನೀಡುವ ಮುನ್ನ ತಪಾಸಣೆಗೆ ಒಳಪಡಿಸಬೇಕು. ಆದರೆ ಈ ಘಟನೆಯಲ್ಲಿ ತಪಾಸಣೆ ನಡೆಸಿಲ್ಲ.

ಅಮನ್ ಅಖ್ವಾ ರಾಯ್‌ಪುರ ಬಿಜೆಪಿ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಸಯೀದ್ ಅಲಿ ಅಮನ್ ಮಾಲೀಕತ್ವದ ಕಂಪನಿ.

ಈ ಮಧ್ಯೆ, ಬಾಟಲಿ ನೀಡುವ ಮುನ್ನ ಓಪನ್ ಮಾಡಲಾಗಿತ್ತು. ಹೀಗಾಗಿ ಇದರ ಹಿಂದೆ ಯಾವುದೋ ಪಿತೂರಿ ಇದೆ ಎಂದು ಅಮನ್ ಕಂಪನಿ ಆರೋಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

SCROLL FOR NEXT