2006 ಜುಲೈ 11ರಂದು ನಡೆದ ರೈಲು ಸ್ಫೋಟದ ಚಿತ್ರ 
ದೇಶ

7/11ಮುಂಬಯಿ ರೈಲು ಸ್ಫೋಟ ಪ್ರಕರಣ: ಇಂದು ತೀರ್ಪು ಪ್ರಕಟ

ಜುಲೈ 11 2006 ರಲ್ಲಿ ಮುಂಬಯಿ ಉಪನಗರ ರೈಲಿನಲ್ಲಿ ಬಾಂಬ್ ಸ್ಫೋಟಿಸಿ 188 ಮಂದಿ ದಾರುಣವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ...

ಮುಂಬಯಿ: ಜುಲೈ 11 2006 ರಲ್ಲಿ ಮುಂಬಯಿ ಉಪನಗರ ರೈಲಿನಲ್ಲಿ ಬಾಂಬ್ ಸ್ಫೋಟಿಸಿ 188 ಮಂದಿ ದಾರುಣವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಹಾರಾಷ್ಟ್ರ  ಕಂಟ್ರೋಲ್ ಆಫ್ ಆರ್ಗನೈಸಡ್  ಕ್ರೈಮ್ ಆ್ಯಕ್ಟ್ ನ ವಿಶೇಷ ನ್ಯಾಯಾಲಯ ಇಂದು ಅಂತಿಮ ತೀರ್ಪು ಪ್ರಕಟಿಸಲಿದೆ.

ಮೋಕಾ  ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಯತಿನ್ ಶಿಂಧೆ ಪ್ರಕರಣ ಸಂಬಂಧ 192 ಸಾಕ್ಷಿಗಳನ್ನು ವಿಚಾರಣೆ ನಡೆಸಿ 2014 ರ ಆಗಸ್ಟ್ 19 ರಂದು ವಿಚಾರಣೆ ಮುಕ್ತಾಯಗೊಳಿಸಿದ್ದರು.  ಘಟನೆ ನಡೆದ 8 ವರ್ಷಗಳ ನಂತರ ಇಂದು ಅಪರಾಧಿಗಳ ವಿರುದ್ಧ ತೀರ್ಪು ಪ್ರಕಟಿಸಲಿದ್ದಾರೆ.

ಜುಲೈ 11 ರಂದು ಮುಂಬಯಿ ಉಪನಗರ ರೈಲು ನಿಲ್ದಾಣದ ಪ್ರಥಮ ದರ್ಜೆ ಕೋಚ್ ನಲ್ಲಿ 7 ಆರ್ ಡಿಎಕ್ಸ್ ಬಾಂಬ್ ಇರಿಸಿ ಸ್ಫೋಟಿಸಲಾಗಿತ್ತು. 188 ಮಂದಿ ಸಾವನ್ನಪ್ಪಿ 829 ಜನ ತೀವ್ರವಾಗಿ ಗಾಯಗೊಂಡಿದ್ದರು. ಈ ಸಂಬಂಧ ಎಂಡು ಐಪಿಎಸ್,  5, ಐಎಎಸ್ ಅಧಿಕಾರಿಗಳು, 18 ವೈದ್ಯರನ್ನು  ಸೇರಿ ಒಟ್ಟು 193 ಸಾಕ್ಷಿಗಳ ವಿಚಾರಣೆ ನಡೆದಿತ್ತು. 5.500 ಪುಟಗಳ ತೀರ್ಪನ್ನು ಇಂದು ನ್ಯಾಯಾಲಯ ಪ್ರಕಟಿಸಲಿದೆ.






Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಡಾಕ್ ಲಡಾಯಿ: ಅ. 7 ರ ಮಾತುಕತೆಗೆ ಮುನ್ನ ಪೂರ್ವ ಸಿದ್ಧತಾ ಸಭೆಗೆ ಗೃಹ ಸಚಿವಾಲಯ ಕರೆ

ಜಾತಿಗಣತಿ ಸಮೀಕ್ಷೆಗೆ ನಿತ್ಯವೂ ಸಮಸ್ಯೆ: ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ಸಿಎಂ ಮುಂದು, ಇಂದು ಮಹತ್ವದ ಸಭೆ

Donald Trump ಸುಂಕ ಘೋಷಣೆ ಅ.1ರಿಂದ ಜಾರಿ: ಯಾವುದಕ್ಕೆ ಎಷ್ಟು ತೆರಿಗೆ? ಇಲ್ಲಿದೆ ಮಾಹಿತಿ...

DYSp ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ: ನ್ಯಾ. ಕೇಶವ ನಾರಾಯಣ ಆಯೋಗದ ಶಿಫಾರಸ್ಸು ತಿರಸ್ಕಾರ

ಜಗನ್ ಮೋಹನ್ ರೆಡ್ಡಿ 'ಸೈಕೋ': ನಂದಮೂರಿ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ!

SCROLL FOR NEXT