ಗೋಮಾಂಸ ನಿಷೇಧ ವಿರೋಧಿಸಿ ಶ್ರೀನಗರದಲ್ಲಿ ಕಲ್ಲು ತೂರಾಟ ನಡೆಸುತ್ತಿರುವ ಯುವಕರು 
ದೇಶ

ಗೋಮಾಂಸ ನಿಷೇಧ: ಐಸ್, ಪಾಕ್ ಬಾವುಟ ಪ್ರದರ್ಶಿಸಿದ ಯುವಕರು

ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಗೋಮಾಂಸ ಮಾರಾಟಕ್ಕೆ ಅಲ್ಲಿನ ಹೈಕೋರ್ಟ್ ನಿಷೇಧ ಹೇರಿರುವುದನ್ನು ವಿರೋಧಿ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಗೋಮಾಂಸ ಮಾರಾಟಕ್ಕೆ ಅಲ್ಲಿನ ಹೈಕೋರ್ಟ್ ನಿಷೇಧ ಹೇರಿರುವುದನ್ನು ವಿರೋಧಿಸಿರುವ ಕೆಲ ಸಂಘಟನೆಗಳು ಕೈಗೊಂಡಿದ್ದ ಪ್ರತಿಭಟನೆ ತ್ರೀವ್ರಗೊಂಡಿದ್ದು, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಸಂಭವಿಸಿದೆ.

ಘರ್ಷಣೆ ವೇಳೆ ಪ್ರತಿಭಟನಾಕಾರರು ಪಾಕಿಸ್ತಾನ ಮತ್ತು ಇಸ್ಲಾಮಿಕ್ ಸ್ಟೇಟ್ ಬಾವುಟನ್ನು ಹಾರಿಸಿದ್ದಾರೆ. ಶುಕ್ರವಾರದ ಪ್ರಾರ್ಥನೆ ನಂತರ ಕೆಲ ಯುವಕರು ಗೋಮಾಂಸ ನಿಷೇಧ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಐತಿಹಾಸಿಕ ಇತಿಹಾಸವಿರುವ ಜಾಮಿಯಾ ಮಸೀದಿ ಬಳಿ ಆ ಯುವಕರು ಅಲ್ ಜಿಹಾದ್ ಉಗ್ರ ಸಂಘಟನೆ, ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಮತ್ತು ಪಾಕಿಸ್ತಾನದ ಬಾವುಟಗಳನ್ನು ಪ್ರದರ್ಶಿಸಿದ್ದಾರೆ.

ಅಷ್ಟೇ ಅಲ್ಲದೇ, ಲಷ್ಕರ್ ಇ ತೋಯ್ಬಾ ಸಂಸ್ಥಾಪಕ ಹಫೀಜ್ ಸಯ್ಯದ್ ಮತ್ತು ಹಿಜ್ ಬುಲ್ ಮುಜಾದ್ದೀನ್ ಕಮಾಂಡರ್ ಬುರ್ಹನ್ ಮುಜಾಫರ್ ಇರುವ ಪೋಸ್ಟರ್ ಗಳನ್ನು ತಂದು ಪ್ರದರ್ಶಿಸಿದ್ದಾರೆ. ನಂತರ ಪೊಲೀಸರ ಮೇಲೆ ಕೆಲ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಭಾರೀ ಕಲ್ಲೆಸೆತದಲ್ಲಿ ತೊಡಗಿದ್ದ ಗುಂಪನ್ನು ಚದುರಿಸಲು ಪೊಲೀಸರು ಅಶ್ರು ವಾಯು ಸಿಡಿಸಿದ್ದಾರೆ. ಗಾಯಾಳುಗಳ ಬಗ್ಗೆ ಇನ್ನು ವರದಿಯಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT