ರಾಮಲಿಂಗರಾಜು 
ದೇಶ

ಸತ್ಯಂ ಕಂಪ್ಯೂಟರ್ಸ್: ರು. 1800 ಕೋಟಿ ದಂಡ ಪಾವತಿಗೆ ಸೆಬಿ ಆದೇಶ

ಸತ್ಯಂ ಕಂಪ್ಯೂಟರ್ಸ್ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಕಂಪನಿ ಮುಖ್ಯಸ್ಥರಾಗಿದ್ದ ರಾಮಲಿಂಗ ರಾಜು ಮತ್ತು ಅವರ ಕುಟುಂಬ ಸದಸ್ಯರು ಸೇರಿದಂತೆ ಹತ್ತು...

ಮುಂಬೈ: ಸತ್ಯಂ ಕಂಪ್ಯೂಟರ್ಸ್ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಕಂಪನಿ ಮುಖ್ಯಸ್ಥರಾಗಿದ್ದ ರಾಮಲಿಂಗ ರಾಜು ಮತ್ತು ಅವರ ಕುಟುಂಬ ಸದಸ್ಯರು ಸೇರಿದಂತೆ ಹತ್ತು ಕಂಪನಿಗಳು ಅಕ್ರಮವಾಗಿ ಗಳಿಸಿರುವ ರು. 1800 ಕೋಟಿ ಹಿಂತಿರುಗಿಸುವಂತೆ ಭಾರತೀಯ ಷೇರು ಮಾರುಕಟ್ಟೆ ನಿಯಂತ್ರಣ ಮಂಡಳಿ(ಸೆಬಿ) ಗುರುವಾರ ಆದೇಶಿಸಿದೆ. 
ಇದರ ಜೊತೆಗೆ ಅಕ್ರಮವಾಗಿ ಗಳಿಸಿರುವ ಹಣಕ್ಕೆ 2009ರ ಜನವರಿಯಿಂದ ಇಲ್ಲಿವರೆಗೆ ಆಗುವ ಸುಮಾರು ರು. 1500 ಕೋಟಿಯಷ್ಟು ಬಡ್ಡಿಯನ್ನು ದಂಡ ರೂಪದಲ್ಲಿ ಪಾವತಿಸಬೇಕೆಂತಲೂ ಹೇಳಿದೆ. 
ಅಕ್ರಮ ವಹಿವಾಟಿಗೆ ಸಂಬಂಧಿಸಿದಂತೆ ಕಳೆದ ವರ್ಷದ ಜುಲೈನಲ್ಲಿ ಸೆಬಿ ನೀಡಿದ್ದ ಆದೇಶದ ಮುಂದುವರೆದ ಭಾಗ ಇದಾಗಿದೆ. ಆಗ ರಾಮಲಿಂಗರಾಜು ಮತ್ತು ಇತರ ನಾಲ್ವರು 14 ವರ್ಷ ಷೇರುಪೇಟೆಯಲ್ಲಿ ವಹಿವಾಟು ನಡೆಸಿದಂತೆ ನಿಷೇಧದೊಂದಿಗೆ ರು. 1.849 ಕೋಟಿ ಬಡ್ಡಿ ರೂಪದ ದಂಡ ವಿಧಿಸಿತ್ತು. 
ಗುರುವಾರದ ಆದೇಶದಲ್ಲಿ ಪ್ರತ್ಯೇಕವಾಗಿ ದಂಡ ನಿಗದಿಪಡಿಸಿದೆ. ರಾಜು ಕುಟುಂಬದ ನಿಯಂತ್ರಣದಲ್ಲಿರುವ ಎಸ್ಆರ್ಎಸ್ಆರ್ ಹೋಲ್ಡಿಂಗ್ಸ್, ಕುಟುಂಬ ಸದಸ್ಯರು, ಕಂಪನಿಯ ಮಾಜಿ ಅಧಿಕಾರಿಗಳ ವಿರುದ್ಧ ಆದೇಶ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT