ಸಾಂದರ್ಭಿಕ ಚಿತ್ರ 
ದೇಶ

ಡೆಂಗ್ಯೂ ನಿಂದ ಮಗ ಸಾವು: ನೊಂದ ಪೋಷಕರ ಆತ್ಮಹತ್ಯೆ

ಡೆಂಗ್ಯೂ ಜ್ವರದಿಂದ 7 ವರ್ಷದ ಮಗ ಸಾವನ್ನಪ್ಪಿದ್ದರಿಂದ ನೊಂದ ತಂದೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ....

ನವದೆಹಲಿ: ಡೆಂಗ್ಯೂ ಜ್ವರದಿಂದ 7 ವರ್ಷದ ಮಗ ಸಾವನ್ನಪ್ಪಿದ್ದರಿಂದ ನೊಂದ ತಂದೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ದೆಹಲಿಯಲ್ಲಿ ನಡೆದಿದೆ.

ಒಡಿಸಾ ಮೂಲದ ಲಕ್ಷ್ಮಿ ಚಂದ್ರ ಮತ್ತು ಬಬಿತಾ ರೌಟ್ ಎಂಬುವರ ಪುತ್ರ ಅವಿನಾಶ್ ಶಂಕಿತ ಡೆಂಗ್ಯೂನಿಂದ ಸೆಪ್ಟಂಬರ್ 8ರಂದು ಮೃತ ಪಟ್ಟಿದ್ದಾನೆ. ಇದರಿಂದ ಮನನೊಂದ ದಂಪತಿ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ತಾವು ಸಾಯುವ ಮುನ್ನ ಸೂಸೈಡ್ ನೋಟ್ ಬರೆದಿಟ್ಟು ತಮ್ಮ ಸಾವಿಗೆ ತಾವೇ ಕಾರಣ ಎಂದು ಒಡಿಯಾ ಭಾಷೆಯಲ್ಲಿ ಬರೆದಿಟ್ಟಿದ್ದಾರೆ.

ಸೆಪ್ಟಂಬರ್ 8 ರಂದು ದೆಹಲಿಯ ಎರಡು ಆಸ್ಪತ್ರೆಗಳಿಗೆ ತಮ್ಮ ಮಗನನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಎರಡು ಆಸ್ಪತ್ರೆಗಳಿಗೆ ನೊಟೀಸ್ ನೀಡಿದೆ. ಇನ್ನು ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಆಸ್ಪತ್ರೆ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT