ರಾಮ್‌ದೇವ್‌ 
ದೇಶ

ಯೋಗ ಮೂಲಕ ದೇಹಕ್ಕೆ ಅಚ್ಚೇದಿನ್ ಬರುತ್ತೆ; ದೇಶಕ್ಕೆ ಯಾವಾಗ ಬರುತ್ತೋ: ರಾಮ್‌ದೇವ್‌

ಯೋಗದಿಂದ ಜನರಿಗೆ ಉತ್ತಮ ಆರೋಗ್ಯ ದೊರೆಯುವ ಮೂಲಕ ಅವರ ಬಾಳಿನಲ್ಲಿ ಅಚ್ಛೇ ದಿನ್ ಬರುತ್ತದೆ. ಆದರೆ ದೇಶಕ್ಕೆ ಅಚ್ಛೆ ದಿನ್ ಯಾವಾಗ ಬರುತ್ತದೆ ಎಂಬುದು...

ಜೈಸಲ್‌ಮೇರ್‌: ಯೋಗದಿಂದ ಜನರಿಗೆ ಉತ್ತಮ ಆರೋಗ್ಯ ದೊರೆಯುವ ಮೂಲಕ ಅವರ ಬಾಳಿನಲ್ಲಿ ಅಚ್ಛೇ ದಿನ್ ಬರುತ್ತದೆ. ಆದರೆ ದೇಶಕ್ಕೆ ಅಚ್ಛೆ ದಿನ್ ಯಾವಾಗ ಬರುತ್ತದೆ ಎಂಬುದು ಪ್ರಧಾನಿ ನರೇಂದ್ರ ಮೋದಿ ಅಥವಾ ದೇವರಿಗೆ ಮಾತ್ರ ಗೊತ್ತು ಎಂದು ಯೋಗ ಗುರು ಬಾಬಾ ರಾಮ್‌ದೇವ್‌ ಹೇಳಿದ್ದಾರೆ.
ಭಾರತೀಯರು ವಿದೇಶೀ ಬ್ಯಾಂಕುಗಳಲ್ಲಿ ಗುಡ್ಡೆ ಹಾಕಿರುವ ಕಪ್ಪು ಹಣವನ್ನು ದೇಶಕ್ಕೆ ಮರಳಿ ತರಲು ಧನಾತ್ಮಕ ಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಳ್ಳುವರೆಂಬ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ. 
ಸುದ್ದಿಗಾರರೊಂದಿಗೆ ಮಾತನಾಡಿದ ರಾಮ್ ದೇವ್ ಬಾಬಾ ಅವರು, ನರೇಂದ್ರ ಮೋದಿ ಅವರೊಂದಿಗೆ ಕಪ್ಪು ಹಣದ ವಿಷಯವನ್ನು ಚರ್ಚಿಸಿದ್ದೇನೆ. ಕಪ್ಪು ಹಣವನ್ನು ಮರಳಿ ತರಲು ಅವರು ಧನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸ ನನಗಿದೆ ಮತ್ತು ಅವರಿಗೆ ಈ ವಿಷಯದಲ್ಲಿ ಇನ್ನೂ ಸಾಕಷ್ಟು ಸಮಯಾವಕಾಶ ಇದೆ ಎಂದರು.
ಬಾಬಾ ರಾಮ್‌ ದೇವ್‌ ಅವರು ರಾಜಸ್ಥಾನ ಮುಂಚೂಣಿ ಪ್ರಧಾನ ಕಾರ್ಯಾಲಯದ ಬಿಎಸ್‌ಎಫ್ ಸಿಬ್ಬಂದಿಗಳಿಗಾಗಿ ಇಲ್ಲಿ ಯೋಗ ತರಬೇತಿಯನ್ನು ಕೈಗೊಳ್ಳುತ್ತಿದ್ದಾರೆ. ದೈಹಿಕ ಹಾಗೂ ಮಾನಸಿಕ ಆರೋಗ್ಯ ಮತ್ತು ದೃಢತೆಗಾಗಿ ಬಾಬಾ ಅವರು ಈ ತರಬೇತಿ ಶಿಬಿರವನ್ನು ಕೈಗೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT