ರಾಮ್‌ದೇವ್‌ 
ದೇಶ

ಯೋಗ ಮೂಲಕ ದೇಹಕ್ಕೆ ಅಚ್ಚೇದಿನ್ ಬರುತ್ತೆ; ದೇಶಕ್ಕೆ ಯಾವಾಗ ಬರುತ್ತೋ: ರಾಮ್‌ದೇವ್‌

ಯೋಗದಿಂದ ಜನರಿಗೆ ಉತ್ತಮ ಆರೋಗ್ಯ ದೊರೆಯುವ ಮೂಲಕ ಅವರ ಬಾಳಿನಲ್ಲಿ ಅಚ್ಛೇ ದಿನ್ ಬರುತ್ತದೆ. ಆದರೆ ದೇಶಕ್ಕೆ ಅಚ್ಛೆ ದಿನ್ ಯಾವಾಗ ಬರುತ್ತದೆ ಎಂಬುದು...

ಜೈಸಲ್‌ಮೇರ್‌: ಯೋಗದಿಂದ ಜನರಿಗೆ ಉತ್ತಮ ಆರೋಗ್ಯ ದೊರೆಯುವ ಮೂಲಕ ಅವರ ಬಾಳಿನಲ್ಲಿ ಅಚ್ಛೇ ದಿನ್ ಬರುತ್ತದೆ. ಆದರೆ ದೇಶಕ್ಕೆ ಅಚ್ಛೆ ದಿನ್ ಯಾವಾಗ ಬರುತ್ತದೆ ಎಂಬುದು ಪ್ರಧಾನಿ ನರೇಂದ್ರ ಮೋದಿ ಅಥವಾ ದೇವರಿಗೆ ಮಾತ್ರ ಗೊತ್ತು ಎಂದು ಯೋಗ ಗುರು ಬಾಬಾ ರಾಮ್‌ದೇವ್‌ ಹೇಳಿದ್ದಾರೆ.
ಭಾರತೀಯರು ವಿದೇಶೀ ಬ್ಯಾಂಕುಗಳಲ್ಲಿ ಗುಡ್ಡೆ ಹಾಕಿರುವ ಕಪ್ಪು ಹಣವನ್ನು ದೇಶಕ್ಕೆ ಮರಳಿ ತರಲು ಧನಾತ್ಮಕ ಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಳ್ಳುವರೆಂಬ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ. 
ಸುದ್ದಿಗಾರರೊಂದಿಗೆ ಮಾತನಾಡಿದ ರಾಮ್ ದೇವ್ ಬಾಬಾ ಅವರು, ನರೇಂದ್ರ ಮೋದಿ ಅವರೊಂದಿಗೆ ಕಪ್ಪು ಹಣದ ವಿಷಯವನ್ನು ಚರ್ಚಿಸಿದ್ದೇನೆ. ಕಪ್ಪು ಹಣವನ್ನು ಮರಳಿ ತರಲು ಅವರು ಧನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸ ನನಗಿದೆ ಮತ್ತು ಅವರಿಗೆ ಈ ವಿಷಯದಲ್ಲಿ ಇನ್ನೂ ಸಾಕಷ್ಟು ಸಮಯಾವಕಾಶ ಇದೆ ಎಂದರು.
ಬಾಬಾ ರಾಮ್‌ ದೇವ್‌ ಅವರು ರಾಜಸ್ಥಾನ ಮುಂಚೂಣಿ ಪ್ರಧಾನ ಕಾರ್ಯಾಲಯದ ಬಿಎಸ್‌ಎಫ್ ಸಿಬ್ಬಂದಿಗಳಿಗಾಗಿ ಇಲ್ಲಿ ಯೋಗ ತರಬೇತಿಯನ್ನು ಕೈಗೊಳ್ಳುತ್ತಿದ್ದಾರೆ. ದೈಹಿಕ ಹಾಗೂ ಮಾನಸಿಕ ಆರೋಗ್ಯ ಮತ್ತು ದೃಢತೆಗಾಗಿ ಬಾಬಾ ಅವರು ಈ ತರಬೇತಿ ಶಿಬಿರವನ್ನು ಕೈಗೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕು: ಕೇಜ್ರಿವಾಲ್

SCROLL FOR NEXT