ದೇಶ

ನಮಗೆ ಕುಂಟುನೆಪ ಬೇಡ, ನಿಜವಾದ ಒಆರ್‍ಒಪಿ ಬೇಕು: ನಿವೃತ್ತ ಯೋಧರು

ನವದೆಹಲಿ: ಪ್ರಸ್ತುತ ಅಧಿಕಾರದಲ್ಲಿರುವ ಸರ್ಕಾರಕ್ಕೆ ನಮ್ಮಿಂದ ಒಂದೇ ಒಂದು ಬೇಡಿಕೆ ಇದೆ. ಅದೇ ಒಆರ್‍ಒಪಿ ಯೋಜನೆ ಜಾರಿ. ನಮಗೆ ಸರ್ಕಾರದಿಂದ ಕುಂಟುನೆಪಗಳು ಬೇಡ. ನಿಜವಾದ ಒಆರ್‍ಒಪಿ ಯೋಜನೆ ಬೇಕು ಎಂದು ನಿವೃತ್ತ ಯೋಧರು ಶನಿವಾರ ಹೇಳಿದ್ದಾರೆ.

ನಿವೃತ್ತ ಯೋಧರ ಬೇಡಿಕೆ ಈಡೇರಿಕೆ ಕೋರಿ ಇಂದು ನವದೆಹಲಿ ನಡೆಯುತ್ತಿರುವ ಗೌರವ್ ರ್ಯಾಲಿಯಲ್ಲಿ ಮಾತನಾಡಿರುವ ಅವರು, ಪ್ರಸ್ತುತ ಜಾರಿ ಮಾಡಿರುವ ಒಆರ್‍ಒಪಿ ಯೋಜನೆಯಲ್ಲಿ ಹಲವು ನ್ಯೂನತೆಗಳಿದ್ದು, ನಮಗೆ ನಿಜವಾದ ಒಆರ್‍ಒಪಿ ಯೋಜನೆ ಜಾರಿಯಾಗಬೇಕಿದೆ. ಈ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಿವೃತ್ತ ಯೋಧರೊಂದಿಗೆ ಚರ್ಚೆ ನಡೆಸಬೇಕಿದೆ ಎಂದು ಹೇಳಿದ್ದಾರೆ.

42 ವರ್ಷಗಳ ನಂತರ ನಮಗೆ ಇದೀಗ ಒಆರ್‍ಒಪಿ ಯೋಜನೆ ಜಾರಿಯಾಗಿದೆ. ಇದಕ್ಕೆ ನಮಗೆ ಸಂತೋಷವಿದೆ. ಪ್ರಧಾನಿಯವರಿಗೆ ನಾವು ಧನ್ಯವಾದವನ್ನೂ ಸಲ್ಲಿಸಿದ್ದೇವೆ. ಆದರೆ, ನ್ಯೂನತೆಗಳನ್ನೊಳಗೊಂಡಿರುವ ಒಆರ್‍ಒಪಿ ಯೋಜನೆಯನ್ನು ಹಿಂಪಡೆದು ನಿಜವಾದ ಒಆರ್‍ಒಪಿ ಯೋಜನೆ ಜಾರಿಗೊಳಿಸಬೇಕಿದೆ ಎಂದು ಹೇಳಿದ್ದಾರೆ.

SCROLL FOR NEXT