ರಾಬರ್ಟ್ ವಾದ್ರಾ(ಸಂಗ್ರಹ ಚಿತ್ರ) 
ದೇಶ

ತಪಾಸಣೆಯಿಂದ ವಿನಾಯಿತಿ: ಸೌಲಭ್ಯ ಹಿಂತೆಗೆದುಕೊಳ್ಳಲು ರಾಬರ್ಟ್ ವಾದ್ರಾ ಒತ್ತಾಯ

ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸುವುದರಿಂದ ವಿನಾಯಿತಿ ನೀಡುವ ಆಯ್ದ ಅತಿ ಗಣ್ಯ ವ್ಯಕ್ತಿಗಳ ಪಟ್ಟಿಯಿಂದ ತಮ್ಮ ಹೆಸರನ್ನು ತೆಗೆದುಹಾಕುವಂತೆ...

ನವದೆಹಲಿ: ವಿಮಾನ ನಿಲ್ದಾಣದಲ್ಲಿ ತಪಾಸಣೆ ಮಾಡುವುದರಿಂದ ವಿನಾಯಿತಿ ನೀಡುವ ಆಯ್ದ ಅತಿ ಗಣ್ಯ ವ್ಯಕ್ತಿಗಳ ಪಟ್ಟಿಯಿಂದ ತಮ್ಮ ಹೆಸರನ್ನು ತೆಗೆದುಹಾಕುವಂತೆ ಪ್ರಿಯಾಂಕ ಗಾಂಧಿ ಪತಿ, ರಾಬರ್ಟ್ ವಾದ್ರಾ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ತಾವು ಅತಿ ಗಣ್ಯ ವ್ಯಕ್ತಿಯಲ್ಲ, ಆದುದರಿಂದ ತಮ್ಮ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಬೇಕು ಎಂದು ಹೇಳಿರುವ ಅವರು, ತಮ್ಮ ಹೆಸರಿಗೆ ಧಕ್ಕೆಯನ್ನುಂಟುಮಾಡಲು ಕೆಲವರು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪತ್ರಿಕೆಯೊಂದಕ್ಕೆ ಮಾತನಾಡಿರುವ ಅವರು, ಈ ವಿಷಯದಲ್ಲಿ ಸ್ಪಷ್ಟವಾಗಿದ್ದೇನೆ. ನಾನು ಗಣ್ಯ ಅಥವಾ ಅತಿ ಗಣ್ಯ ವ್ಯಕ್ತಿಯಲ್ಲ. ನನ್ನನ್ನು ಸಾಮಾನ್ಯನಂತೆ ಪರಿಗಣಿಸಿ ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ. ಸಾಮಾನ್ಯ ಪ್ರಜೆಯಂತೆ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳ ಭದ್ರತಾ ತಪಾಸಣೆಗೆ ಒಳಗಾಗಲು ಯಾವುದೇ ಸಮಸ್ಯೆಯಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಪ್ರತಿ ನಿಲ್ದಾಣಕ್ಕೆ ಹೋಗಿ ಅಧಿಕಾರಿಗಳಿಗೆ ಹೇಳಿ ಹೆಸರು ತೆಗೆದು ಹಾಕಿಸಲೂ ಸಿದ್ಧನಾಗಿದ್ದೇನೆ ಎಂದು ತಿಳಿಸಿದ್ದಾರೆ.

ರಾಬರ್ಟ್ ವಾದ್ರಾ ಅವರಿಗೆ ವಿಮಾನ ನಿಲ್ದಾಣದಲ್ಲಿ ತಪಾಸಣೆಯಿಂದ ವಿನಾಯಿತಿ ನೀಡುವ ಕುರಿತು ಇತ್ತೀಚೆಗೆ ವಿವಾದವೇರ್ಪಟ್ಟಿತ್ತು. ರಾಬರ್ಟ್ ವಾದ್ರಾ ಅವರ ಹೆಸರನ್ನು ವಿವಿಐಪಿ ಪಟ್ಟಿಯಿಂದ ತೆಗೆದುಹಾಕುವ ಯಾವುದೇ ಯೋಜನೆಯಿಲ್ಲ ಎಂದು ಇತ್ತೀಚೆಗೆ ಸರ್ಕಾರ ಸ್ಪಷ್ಟಪಡಿಸಿತ್ತು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT