ಸಾಂದರ್ಭಿಕ ಚಿತ್ರ 
ದೇಶ

ಐಎಸ್‌ನೊಂದಿಗೆ ಲಿಂಕ್, ತಿರುವನಂತಪುರಂನಲ್ಲಿ 4 ಯುವಕರ ಬಂಧನ

ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಅಬುಧಬಿಯಿಂದ ಆಗಮಿಸಿದ ನಾಲ್ವರು ಶಂಕಿತ...

ತಿರುವನಂತಪುರಂ: ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಅಬುಧಬಿಯಿಂದ ಆಗಮಿಸಿದ ನಾಲ್ವರು ಶಂಕಿತ ಯುವಕರನ್ನು ಮಂಗಳವಾರ ಬಂಧಿಸಲಾಗಿದೆ.

ಅಬುಧಬಿಯಿಂದ ಕರಿಪುರ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಯುವಕರನ್ನು ಹಾಗೂ ತಿರುವನಂತಪುರ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಯುವಕರನ್ನು ರಾಜ್ಯ ಗುಪ್ತಚರ ಅಧಿಕಾರಿಗಳು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ನಾಲ್ವರು ಯುವಕರು ಮೇಲ್ನೋಟಕ್ಕೆ ಐಎಸ್ ಉಗ್ರರ ಜತೆ ನಂಟು ಇರಿಸಿಕೊಂಡಿರುವುದು ಸಾಬೀತಾಗಿದೆ. ಕಳೆದೆರಡು ದಿನಗಳ ಹಿಂದಷ್ಟೇ ಇದೇ ರೀತಿ ಶಂಕಾಸ್ಪದ ವ್ಯಕ್ತಿಗಳಿಬ್ಬರನ್ನು ಮಲಪ್ಪುರಂನಲ್ಲಿ ವಿಚಾರಣೆಗೊಳಪಡಿಸಲಾಗಿತ್ತು. ಅಷ್ಟೇ ಅಲ್ಲ ಈ ಯುವಕರಲ್ಲೊಬ್ಬನ ಸಂಬಂಧಿ ಎನ್ನಲಾದ ಇನ್ನೊಬ್ಬ ಯುವಕನನ್ನು ಈ ನಾಲ್ವರನ್ನು ವಶಕ್ಕೆ ಪಡೆಯುವುದಕ್ಕೂ ಕೆಲವೇ ಗಂಟೆಗಳ ಮೊದಲು ವಿಚಾರಣೆಗೊಳಪಡಿಸಲಾಗಿತ್ತು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT