ಸಾಂದರ್ಭಿಕ ಚಿತ್ರ 
ದೇಶ

ಐಎಸ್‌ನೊಂದಿಗೆ ಲಿಂಕ್, ತಿರುವನಂತಪುರಂನಲ್ಲಿ 4 ಯುವಕರ ಬಂಧನ

ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಅಬುಧಬಿಯಿಂದ ಆಗಮಿಸಿದ ನಾಲ್ವರು ಶಂಕಿತ...

ತಿರುವನಂತಪುರಂ: ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಅಬುಧಬಿಯಿಂದ ಆಗಮಿಸಿದ ನಾಲ್ವರು ಶಂಕಿತ ಯುವಕರನ್ನು ಮಂಗಳವಾರ ಬಂಧಿಸಲಾಗಿದೆ.

ಅಬುಧಬಿಯಿಂದ ಕರಿಪುರ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಯುವಕರನ್ನು ಹಾಗೂ ತಿರುವನಂತಪುರ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಯುವಕರನ್ನು ರಾಜ್ಯ ಗುಪ್ತಚರ ಅಧಿಕಾರಿಗಳು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ನಾಲ್ವರು ಯುವಕರು ಮೇಲ್ನೋಟಕ್ಕೆ ಐಎಸ್ ಉಗ್ರರ ಜತೆ ನಂಟು ಇರಿಸಿಕೊಂಡಿರುವುದು ಸಾಬೀತಾಗಿದೆ. ಕಳೆದೆರಡು ದಿನಗಳ ಹಿಂದಷ್ಟೇ ಇದೇ ರೀತಿ ಶಂಕಾಸ್ಪದ ವ್ಯಕ್ತಿಗಳಿಬ್ಬರನ್ನು ಮಲಪ್ಪುರಂನಲ್ಲಿ ವಿಚಾರಣೆಗೊಳಪಡಿಸಲಾಗಿತ್ತು. ಅಷ್ಟೇ ಅಲ್ಲ ಈ ಯುವಕರಲ್ಲೊಬ್ಬನ ಸಂಬಂಧಿ ಎನ್ನಲಾದ ಇನ್ನೊಬ್ಬ ಯುವಕನನ್ನು ಈ ನಾಲ್ವರನ್ನು ವಶಕ್ಕೆ ಪಡೆಯುವುದಕ್ಕೂ ಕೆಲವೇ ಗಂಟೆಗಳ ಮೊದಲು ವಿಚಾರಣೆಗೊಳಪಡಿಸಲಾಗಿತ್ತು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT