ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮಸಿಂಘೆ 
ದೇಶ

ಮೀನುಗಾರರಿಗೆ ಮಾನವೀಯತೆ ತೋರಿಸಿ: ಪ್ರಧಾನಿ ಕೋರಿಕೆ

ಮೀನುಗಾರರ ಸಮಸ್ಯೆಯನ್ನು ಮಾನವೀಯ ನೆಲೆಯಲ್ಲಿ ಕಾಣುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶ್ರೀಲಂಕಾ ಪ್ರಧಾನಿ...

ನವದೆಹಲಿ: ಮೀನುಗಾರರ ಸಮಸ್ಯೆಯನ್ನು ಮಾನವೀಯ ನೆಲೆಯಲ್ಲಿ ಕಾಣುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರನ್ನು ಒತ್ತಾಯಿಸಿದ್ದಾರೆ.

ಭಾರತ ಮತ್ತು ಶ್ರೀಲಂಕಾ ಮೀನುಗಾರರ ಸಮಸ್ಯೆಗಳನ್ನು ನಾವಿಬ್ಬರೂ ಚರ್ಚಿಸಿದ್ದೇವೆ. ಅವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಎರಡೂ ದೇಶಗಳ  ಮೀನುಗಾರರ ಒಕ್ಕೂಟಗಳು ತಮ್ಮ ಪ್ರಯತ್ನವನ್ನು ಮುಂದುವರಿಸಲಿ ಎಂದು ನಾವು ಒಪ್ಪಿಕೊಂಡಿದ್ದೇವೆ. ಮೀನುಗಾರಿಕೆಯನ್ನು ನಂಬಿ ಜೀವನ ಸಾಗಿಸುತ್ತಿರುವ ಅನೇಕ ಮೀನುಗಾರರ ಬದುಕಿನ ಮೇಲೆ ಪರಿಣಾಮ ಬೀರುವುದರಿಂದ ಸಮಸ್ಯೆಯನ್ನು ಮಾನವೀಯ ನೆಲೆಯಲ್ಲಿ ಕಾಣುವಂತೆ ಮಾತುಕತೆ ವೇಳೆ ಹೇಳಿರುವುದಾಗಿ ದೆಹಲಿಯಲ್ಲಿಂದು ಪ್ರಧಾನಿ ಮೋದಿ ಜಂಟಿ ಹೇಳಿಕೆ ವೇಳೆ ತಿಳಿಸಿದ್ದಾರೆ.

ಭಾರತೀಯ ಮೀನುಗಾರರು ಸಮುದ್ರದ ಆಳದಲ್ಲಿ ಮೀನುಗಾರಿಕೆ ನಡೆಸುವಂತೆ ಪ್ರೋತ್ಸಾಹಿಸಲು ತೆಗೆದುಕೊಂಡಿರುವ ಕ್ರಮಗಳ ಕುರಿತು ಶ್ರೀಲಂಕಾ ಪ್ರಧಾನಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಮೂರು ದಿನಗಳ ಭೇಟಿಗಾಗಿ ನಿನ್ನೆ ಸಂಜೆ ದೆಹಲಿಗೆ ಆಗಮಿಸಿದ್ದರು. ಅವರು ಕಳೆದ ತಿಂಗಳಷ್ಟೇ ಶ್ರೀಲಂಕಾ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT