ಶಶಿ ತರೂರ್ 
ದೇಶ

ಮೋದಿ ಮಾತಿಗೂ, ವಾಸ್ತವಿಕತೆಗೂ ಭಾರಿ ಅಂತರ ಇದೆ: ಶಶಿ ತರೂರ್

ಪ್ರಧಾನಿ ನರೇಂದ್ರ ಮೋದಿ ಅವರ 'ಮನತಟ್ಟುವ ಮಾತುಗಳಿಗೂ' ಮತ್ತು ವಾಸ್ತವಿಕತೆಗೂ ಭಾರಿ ಅಂತರ ಇದೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಮಂಗಳವಾರ...

ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರ 'ಮನತಟ್ಟುವ ಮಾತುಗಳಿಗೂ' ಮತ್ತು ವಾಸ್ತವಿಕತೆಗೂ ಭಾರಿ ಅಂತರ ಇದೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಮಂಗಳವಾರ ಹೇಳಿದ್ದಾರೆ.

ಮೋದಿ ಅವರ ವಾಕ್ಚಾತುರ್ಯ ಮತ್ತು ವಾಸ್ತವಿಕತೆಯ ನಡುವೆ ಭಾರಿ ಅಂತರ ಇದೆ. ಅವರು ಉತ್ತಮ ವಿಚಾರಗಳನ್ನು ಹೇಳುತ್ತಾರೆ. ಆದರೆ ಆ ಬಗ್ಗೆ ಗಮನ ಹರಿಸುವುದಿಲ್ಲ ಮಾಜಿ ಕೇಂದ್ರ ಸಚಿವರು ಅಭಿಪ್ರಾಯ ಪಟ್ಟಿದ್ದಾರೆ.

ಒಬ್ಬ ವೈದ್ಯ ಬರೀ ಉತ್ತಮ ಸಲಹೆ ನೀಡುವುದರಿಂದ ಮಾತ್ರ ಕಾಯಿಲೆ ಗುಣಪಡಿಸಲು ಸಾಧ್ಯವಿಲ್ಲ. ಅದಕ್ಕೆ ಸೂಕ್ತ ಚಿಕಿತ್ಸೆ ಮತ್ತು ಔಷಧಿಯ ಬರೆಯುವುದು ಬಹಳ ಮುಖ್ಯ ಎಂದು ತರೂರ್ ಹೇಳಿದ್ದಾರೆ.

ಪಾಕಿಸ್ತಾನ ವಿಷಯವನ್ನು ಪ್ರಸ್ತಾಪಿಸಿರುವ ತರೂರ್, ನಾಗರಿಕ ಶಕ್ತಿ ಹೆಚ್ಚಿದರೆ ಮತ್ತು ಸೇನಾ ಶಕ್ತಿ ಕುಗ್ಗಿದರೆ ಮಾತ್ರ ನೆರೆ ರಾಷ್ಟ್ರದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದಿದ್ದಾರೆ.

'ಭಾರತದಲ್ಲಿ, ದೇಶ ಸೇನೆಯನ್ನು ಹೊಂದಿದೆ. ಆದರೆ ಪಾಕಿಸ್ತಾನದಲ್ಲಿ ಸೇನೆ ದೇಶವನ್ನು ಹೊಂದಿದೆ. ಭಾರತದಲ್ಲಿ ದೇಶ ರಕ್ಷಣೆಗೆ ಸೇನೆ ಸೇರುತ್ತಾರೆ. ಆದರೆ ಪಾಕಿಸ್ತಾನದಲ್ಲಿ, ದೇಶ ನಡೆಸಲು ಸೇನೆ ಸೇರುತ್ತಾರೆ' ತರೂರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT