ಮಣಿಪುರ 
ದೇಶ

ಮಣಿಪುರವನ್ನು 2 ಕೇಂದ್ರಾಡಳಿತ ಪ್ರದೇಶವನ್ನಾಗಿ ವಿಭಜಿಸಲು ಆಗ್ರಹ

ಮಣಿಪುರದಲ್ಲಿ ಉಂಟಾಗಿರುವ ಹಿಂಸಾಚಾರವನ್ನು ತಡೆಗಟ್ಟಲು ಮಣಿಪುರವನ್ನು 2 ಕೆಂದ್ರಾಡಳಿತ ಪ್ರದೇಶವನ್ನಾಗಿ ವಿಭಜಿಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ನವದೆಹಲಿ: ಮಣಿಪುರ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ವಿವಿಧ ಮೂರು ಮಸೂದೆಗಳಿಗೆ ಅಂಗೀಕಾರ ನೀಡಿರುವುದರಿಂದ ಉಂಟಾಗಿರುವ ಹಿಂಸಾಚಾರವನ್ನು ತಡೆಗಟ್ಟಲು ಮಣಿಪುರವನ್ನು 2 ಕೆಂದ್ರಾಡಳಿತ ಪ್ರದೇಶವನ್ನಾಗಿ ವಿಭಜಿಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಎದುರಾಗಿರುವ ಬಿಕ್ಕಟ್ಟಿನ ಬಗ್ಗೆ ಈಶಾನ್ಯ ರಾಜ್ಯದ ಬುಡಕಟ್ಟು ಜನಾಂಗಕ್ಕೆ ಸೇರಿದ ಸಂಸದರು ಆತಂಕ ವ್ಯಕ್ತಪಡಿಸಿದ್ದು, ಹಿಂಸಾಚಾರ ತಡೆಗಟ್ಟುವುದಕ್ಕೆ ಈಗಿನ ಮಣಿಪುರವನ್ನು ಮತ್ತೆ 2 ಕೇಂದ್ರಾಡಳಿತ ಪ್ರದೇಶವನ್ನಾಗಿ ವಿಭಜಿಸುವುದೊಂದೇ ಮಾರ್ಗ ಎಂದು ಹೇಳಿದ್ದಾರೆ. ಸಂಸದರ ಪ್ರಸ್ತಾವನೆ ಕಾರ್ಯರೂಪಕ್ಕೆ ಬಂದರೆ ಮಣಿಪುರ ರಾಜ್ಯವನ್ನು ಹೊರತುಪಡಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳು ಅಸ್ಥಿತ್ವ ಬರಲಿವೆ.

ರಾಜ್ಯ ಸರ್ಕಾರ ಮಣಿಪುರ ಜನರ ಸುರಕ್ಷತೆ ಕಾಯ್ದೆ 2015, ಮಣಿಪುರ ಭೂ ಕಂದಾಯ ಮತ್ತು ಜಮೀನು ಸುಧಾರಣೆ ಕಾಯ್ದೆ 2015 (ಏಳನೇ ತಿದ್ದುಪಡಿ) ಹಾಗೂ ಮಣಿಪುರ ಅಂಗಡಿ ಮುಂಗಟ್ಟೆ ಕಾಯ್ದೆ 2015(ಎರಡನೇ ತಿದ್ದುಪಡಿ) ಮೂರು ಕಾಯ್ದೆಗಳಿಗೆ ಅಂಗೀಕಾರ ನೀಡಿತ್ತು. ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಿದರೆ ಈಗಿನ ಹಿಂಸಾಚಾರ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಮತ್ತೆರಡು ಕೇಂದ್ರಾಡಳಿತ ಪ್ರದೇಶಗಳನ್ನು ಅಸ್ಥಿತ್ವಕ್ಕೆ ತರುವುದು ಸೂಕ್ತ ಎಂದು ಬುಡಕಟ್ಟು ಜನಾಂಗದ ಸಂಸದರು ಅಭಿಪ್ರಾಯಪಟ್ಟಿದ್ದಾರೆ.

ಈ ಮೂರೂ ಕಾಯ್ದೆಗಳು ಬುಡಕಟ್ಟು ಜನರ ರಕ್ಷಣೆಗಿರುವ 1947ರ ಮಣಿಪುರ ಬುಡಕಟ್ಟು ನಿರ್ದೇಶನ ಕಾಯ್ದೆಯ ವಿರುದ್ಧವಾಗಿವೆ ಎಂದು ಬುಡಕಟ್ಟು ನಾಗರಿಕ ಸಮಿತಿ ಗುಂಪುಗಳು ವಿರೋಧ ವ್ಯಕ್ತಪಡಿಸಿದ್ದವು. ಕಾಯ್ದೆಯನ್ನು ವಿರೋಧಿಸಿ ಉಂಟಾಗಿದ್ದ ಹಿಂಸಾಚಾರದಲ್ಲಿ ಈ ವರೆಗೂ 8 ಜನ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT