ನದಿ ಜೋಡಣೆ(ಸಾಂಕೇತಿಕ ಚಿತ್ರ) 
ದೇಶ

ಆಂಧ್ರಪ್ರದೇಶದಲ್ಲಿ ಗೋದಾವರಿ- ಕೃಷ್ಣಾ ನದಿ ಜೋಡಣೆ

ಗೋದಾವರಿ ನದಿಯನ್ನು ಕೃಷ್ಣಾ ನದಿಯೊಂದಿಗೆ ಜೋಡಣೆ ಮಾಡುವ ಮೂಲಕ ನದಿ ಜೋಡಣೆ ಉದ್ದೇಶದಲ್ಲಿ ಆಂಧ್ರಪ್ರದೇಶ ಮಹತ್ವದ ಮೈಲುಗಲ್ಲು ಸ್ಥಾಪಿಸಿದೆ.

ವಿಜಯವಾಡ: ಗೋದಾವರಿ ನದಿಯನ್ನು ಕೃಷ್ಣಾ ನದಿಯೊಂದಿಗೆ ಜೋಡಣೆ ಮಾಡುವ ಮೂಲಕ ನದಿ ಜೋಡಣೆ ಉದ್ದೇಶದಲ್ಲಿ ಆಂಧ್ರಪ್ರದೇಶ ಮಹತ್ವದ ಮೈಲುಗಲ್ಲು ಸ್ಥಾಪಿಸಿದೆ.

ವಿಜಯವಾಡ ಬಳಿ ಇರುವ ಇಬ್ರಾಹಿಂಪಟ್ಟಣದಲ್ಲಿ ಪೈಲೊನ್ ಉದ್ಘಾಟನೆ ಮಾಡುವ ಮೂಲಕ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಗೋದಾವರಿ- ಕೃಷ್ಣಾ ನದಿಗೆ ಔಪಚಾರಿಕವಾಗಿ ಸಂಪರ್ಕ ಕಲ್ಪಿಸಿದರು. ನದಿ ಜೋಡಣೆಯಿಂದ ಖ್ಯಾತ ಇಂಜಿನಿಯರ್ ಕೆ.ಎಲ್ ರಾವ್ ಅವರು ದಶಕಗಳ ಹಿಂದೆ ಸೂಚಿಸಿದ್ದ ಯೋಜನೆ ಕಾರ್ಯರೂಪಕ್ಕೆ ಬಂದಿದ್ದು ಇತಿಹಾಸ ನಿರ್ಮಾಣವಾಗಿ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.
ನೀರಿನ ಸಮಸ್ಯೆ ಎದುರಿಸುತ್ತಿದ್ದ ಕೃಷ್ಣಾ ಹಾಗೂ ಗುಂಟೂರು ಜಿಲ್ಲೆಯ ರೈತರಿಗೆ ನದಿ ಜೋಡಣೆಯಿಂದ ಅನುಕೂಲವಾಗಲಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅವಧಿಯಲ್ಲಿ ನದಿ ಜೋಡಣೆ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಆದರೆ ನಂತರ ಬಂದ ಯುಪಿಎ ಸರ್ಕಾರ ಇದನ್ನು ಪೂರ್ಣಗೊಳಿಸದೇ ಕಡೆಗಣಿಸಿತ್ತು ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT