ನದಿ ಜೋಡಣೆ(ಸಾಂಕೇತಿಕ ಚಿತ್ರ) 
ದೇಶ

ಆಂಧ್ರಪ್ರದೇಶದಲ್ಲಿ ಗೋದಾವರಿ- ಕೃಷ್ಣಾ ನದಿ ಜೋಡಣೆ

ಗೋದಾವರಿ ನದಿಯನ್ನು ಕೃಷ್ಣಾ ನದಿಯೊಂದಿಗೆ ಜೋಡಣೆ ಮಾಡುವ ಮೂಲಕ ನದಿ ಜೋಡಣೆ ಉದ್ದೇಶದಲ್ಲಿ ಆಂಧ್ರಪ್ರದೇಶ ಮಹತ್ವದ ಮೈಲುಗಲ್ಲು ಸ್ಥಾಪಿಸಿದೆ.

ವಿಜಯವಾಡ: ಗೋದಾವರಿ ನದಿಯನ್ನು ಕೃಷ್ಣಾ ನದಿಯೊಂದಿಗೆ ಜೋಡಣೆ ಮಾಡುವ ಮೂಲಕ ನದಿ ಜೋಡಣೆ ಉದ್ದೇಶದಲ್ಲಿ ಆಂಧ್ರಪ್ರದೇಶ ಮಹತ್ವದ ಮೈಲುಗಲ್ಲು ಸ್ಥಾಪಿಸಿದೆ.

ವಿಜಯವಾಡ ಬಳಿ ಇರುವ ಇಬ್ರಾಹಿಂಪಟ್ಟಣದಲ್ಲಿ ಪೈಲೊನ್ ಉದ್ಘಾಟನೆ ಮಾಡುವ ಮೂಲಕ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಗೋದಾವರಿ- ಕೃಷ್ಣಾ ನದಿಗೆ ಔಪಚಾರಿಕವಾಗಿ ಸಂಪರ್ಕ ಕಲ್ಪಿಸಿದರು. ನದಿ ಜೋಡಣೆಯಿಂದ ಖ್ಯಾತ ಇಂಜಿನಿಯರ್ ಕೆ.ಎಲ್ ರಾವ್ ಅವರು ದಶಕಗಳ ಹಿಂದೆ ಸೂಚಿಸಿದ್ದ ಯೋಜನೆ ಕಾರ್ಯರೂಪಕ್ಕೆ ಬಂದಿದ್ದು ಇತಿಹಾಸ ನಿರ್ಮಾಣವಾಗಿ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.
ನೀರಿನ ಸಮಸ್ಯೆ ಎದುರಿಸುತ್ತಿದ್ದ ಕೃಷ್ಣಾ ಹಾಗೂ ಗುಂಟೂರು ಜಿಲ್ಲೆಯ ರೈತರಿಗೆ ನದಿ ಜೋಡಣೆಯಿಂದ ಅನುಕೂಲವಾಗಲಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅವಧಿಯಲ್ಲಿ ನದಿ ಜೋಡಣೆ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಆದರೆ ನಂತರ ಬಂದ ಯುಪಿಎ ಸರ್ಕಾರ ಇದನ್ನು ಪೂರ್ಣಗೊಳಿಸದೇ ಕಡೆಗಣಿಸಿತ್ತು ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಮ ಮಂದಿರ ಟ್ರಸ್ಟ್‌ಗೆ ಮೊದಲ CEO ನೇಮಕ; 'ಆಪರೇಷನ್ ಸಿಂಧೂರ್'​​ನಲ್ಲಿ ಭಾಗಿಯಾಗಿದ್ದ ಜಿತೇಂದ್ರ ಮಿಶ್ರಾ ಹೆಸರು ಘೋಷಣೆ!

ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ಸಹಪಾಠಿ ಮೇಲೆ ಹಲ್ಲೆ: ನಟ ದುನಿಯಾ ವಿಜಯ್ ಪುತ್ರನ ವಿರುದ್ಧ FIR ದಾಖಲು

Nepal Floods: 'ನೀವೇನ್ ದಾನ ಕೊಡ್ತಿಲ್ಲ.. ಪ್ರವಾಹಕ್ಕೆ ನೀವೇ ಕಾರಣ.. ಪರಿಹಾರ ಕೊಡಿ ಅಷ್ಟೇ': ಭಾರತ, ಚೀನಾ, ಅಮೆರಿಕಕ್ಕೆ ನೇಪಾಳ ಖಡಕ್ ಆಗ್ರಹ!

‘15 ರೂ. ಹೇರ್ ಡೈ’: ಕಿಂಗ್ ಚಾರ್ಲ್ಸ್ ಭೇಟಿಗೂ ಮುನ್ನ ಪಾಕಿಸ್ತಾನ ನಾಯಕ Babar Azam ಫುಲ್ ಟ್ರೋಲ್!

ಮೇಕೆದಾಟು ವಿಚಾರದಲ್ಲಿ ಕರ್ನಾಟಕ ದಿಟ್ಟ ಹೆಜ್ಜೆ; CWC ಮುಖ್ಯಸ್ಥರ ಜೊತೆ ಸಚಿವರ ಮಹತ್ವದ ಮಾತುಕತೆ