ಪ್ರಧಾನಿ ನರೇಂದ್ರ ಮೋದಿ 
ದೇಶ

ವಾರಣಾಸಿಗೆ ಪ್ರಧಾನಿ ಭೇಟಿ

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಮೋದಿಯವರು ಇಂದು ಅಲ್ಲಿ ಹಲವಾರು...

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಮೋದಿಯವರು ಇಂದು ಅಲ್ಲಿ ಹಲವಾರು ಯೋಜನೆಗಳಿಗೆ ಚಾಲನೆ ನೀಡಲಿದ್ದು, ಪ್ರತಿಭಟನೆ ನಿರತರಾಗಿರುವ ಗುತ್ತಿಗೆ ಕೆಲಸದ ಶಿಕ್ಷಕರನ್ನು ಭೇಟಿ ಮಾಡಲಿದ್ದಾರೆ.

ಇವತ್ತು ಒಂದು ಇಡೀ ದಿನ ಮೋದಿ ವಾರಣಾಸಿಯಲ್ಲಿ ಕಳೆಯಲಿದ್ದಾರೆ. ಅಲ್ಲಿ ಅವರು  ಜನ್ ಧನ್ ಯೋಜನೆಯಡಿಯಲ್ಲಿ  600 ಜನರಿಗೆ ಸೈಕಲ್ ರಿಕ್ಷಾ ಮತ್ತು ಇ ರಿಕ್ಷಾಗಳನ್ನು ವಿತರಿಸಲಿದ್ದಾರೆ.

ಆದಾಗ್ಯೂ, ಸೈಕಲ್ ರಿಕ್ಷಾಗಳನ್ನು ವಿತರಿಸುವುದಕ್ಕೆ ಉತ್ತರ ಪ್ರದೇಶದ ಸಮಾಜವಾದಿ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. ಸೈಕಲ್ ರಿಕ್ಷಾಗಳನ್ನು ತುಳಿಯುವುದು ಅಮಾನವೀಯ ಕೆಲಸ. ಆದ್ದರಿಂದ ಮೋದಿಯವರು ಸೈಕಲ್ ರಿಕ್ಷಾಗಳನ್ನು ವಿತರಿಸುವ ತೀರ್ಮಾನ ಕೈ ಬಿಡಬೇಕು ಎಂದು ಸರ್ಕಾರ ಒತ್ತಾಯಿಸಿದ್ದಾರೆ.

ಅದೇ ವೇಳೆ ಮೋದಿ ಶಿಕ್ಷಾ ಮಿತ್ರ (ಗುತ್ತಿಗೆ ಶಿಕ್ಷಕರು)ರನ್ನು ಭೇಟಿ ಮಾಡಲಿದ್ದಾರೆ ಎಂದು ಜಿಲ್ಲಾಡಳಿತ ಅಧಿಕಾರಿಗಳು ಹೇಳಿದ್ದಾರೆ.

ಸುಮಾರು 1.72 ಲಕ್ಷ ಶಿಕ್ಷಾ ಮಿತ್ರರು ಈಗ ಪ್ರತಿಭಟನಾ ನಿರತರಾಗಿದ್ದಾರೆ. ಕಳೆದ ಭಾನುವಾರ ಪ್ರತಿಭಟನಾ ನಿರತ ಶಿಕ್ಷಕರೊಬ್ಬರು ಕನೌಜ್ ಜಿಲ್ಲೆಯಲ್ಲಿ ಆತ್ಮ ಹತ್ಯೆ ಮಾಡಿದ್ದರು.

ಇಂದಿನ ಭೇಟಿಯಲ್ಲಿ ಮೋದಿಯವರು ಇಂಟಗ್ರೇಟೆಡ್ ಪವರ್ ಡೆವಲೆಪ್‌ಮೆಂಟ್ ಯೋಜನೆಗೆ ಚಾಲನೆ ನೀಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತಿ ಹೆಚ್ಚು!

ಭಾರತ-ಶ್ರೀಲಂಕಾ 2ನೇ ಟೆಸ್ಟ್ ಡ್ರಾದಲ್ಲಿ ಅಂತ್ಯ; WTC ಪಾಯಿಂಟ್ಸ್‌ ಟೇಬಲ್‌ನಲ್ಲಿ ಟೀಂ ಇಂಡಿಯಾಗೆ ಭಾರೀ ಹೊಡೆತ!

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಶಿವಕುಮಾರ್